1:18 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧವಾಗಿ ಪುನರಾಯ್ಕೆ: 2028 ವರೆಗೆ ಮತ್ತೆ ಸಾರಥ್ಯ

21/08/2023, 20:17

ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೊ – ಅಪರೇಟಿವ್ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆಗೊಂಡಿದೆ. 2028 ವರೆಗೆ ಮತ್ತೆ ಸಾರಥ್ಯ ವಹಿಸಲಿದೆ.
ಆಗಸ್ಟ್ 13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಎಂಸಿಸಿ ಚುನಾವಣಾ ಪ್ರಕ್ರಿಯೆಗೆ ಆಕಾಂಕ್ಷೆವುಳ್ಳ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಗಸ್ಟ್ 20 ರಂದು ನಾಮಪತ್ರ ಪರಿಶೀಲನೆಯಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲಾ 14 ಅರ್ಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ಕ್ರಮಬದ್ದವಾಗಿರುವುದರಿಂದ, ರಿಟರ್ನಿಂಗ್ ಅಧಿಕಾರಿ ಸುಧೀರ್ ಕುಮಾರ್ ಜೆ. ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳನ್ನು ಚುನಾಯಿತರೆಂದು ಫೋಷಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಇದರ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, ಆಗಸ್ಟ್ 27 ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಎಂದು ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ತಿಳಿಸಿದ್ದಾರೆ.

ಈ ಮೂಲಕ 111 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಸಹಕಾರಿ ರಂಗದ ಮುಂಚೂಣಿಯ ಎಂಸಿಸಿ ಬ್ಯಾಂಕಿನ ಚುಕ್ಕಾಣಿ, ಮುಂದಿನ 5 ವರ್ಷಗಳ ಅವಧಿಗೆ, ಹಾಲಿ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ತಂಡದ ಪಾಲಾಗಿದೆ. 111 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ಯಾಂಕಿನ ನಿರ್ದೇಶಕ ಮಂಡಳಿಯ ಆಯ್ಕೆ ಅವಿರೋಧವಾಗಿ ನಡೆದಿದ್ದು, ವೆಲೆನ್ಸಿಯಾ ನಿವಾಸಿ ಅನಿಲ್ ಲೋಬೊ ನೇತೃತ್ವದ ತಂಡದಲ್ಲಿ ಜೆರಾಲ್ಡ್ ಪಿಂಟೋ, ಕಲ್ಯಾಣ್‌ಪುರ, ರೋಶನ್ ಡಿ’ಸೋಜ, ಮುಡಿಪು , ಹೆರಾಲ್ಡ್ ಜೋನ್ ಮೊಂತೆರೊ, ಕೆಲರಾಯ್, ಜೋಸೆಫ್ ಎಂ.ಅನಿಲ್ ಪತ್ರಾವೊ, ದೆರೆಬೈಲ್, ಡೇವಿಡ್ ಡಿ’ಸೋಜ, ಬಜಪೆ, ಮೆಲ್ವಿನ್ ಅಕ್ವಿನಸ್ ವಾಸ್, ಮಂಗಳೂರು, ಜೆ.ಪಿ.ರೋಡ್ರಿಗಸ್, ಪುತ್ತೂರು, ಆಂಡ್ರು ಡಿ’ಸೋಜ, ಮೂಡಬಿದ್ರಿ, ಎಲ್‌ರೊ ಕಿರಣ್ ಕ್ರಾಸ್ಟೊ, ಗಂಗೊಳ್ಳಿ, ಜೆರಾಲ್ಡ್ ಜೂಡ್ ಡಿ’ಸಿಲ್ವ, ಕಾರ್ಕಳ, ವಿನ್ಸೆಂಟ್ ಅನಿಲ್ ಲಸ್ರಾದೊ, ಬಂಟ್ವಾಳ, ಐರಿನ್ ರೆಬೆಲ್ಲೊ, ಕುಲಶೇಖರ ಮತ್ತು ಫ್ರೀಡಾ ಫ್ಲಾವಿಯಾ ಡಿ’ಸೋಜ, ಬಳ್ಕುಂಜೆ ಇದ್ದಾರೆ.
ಹಾಲಿ ಬ್ಯಾಂಕಿನ ಆಡಳಿತ ಮಂಡಳಿಯ ಅವಧಿಯು ಅಗೋಸ್ತ್ 26ರಂದು ಕೊನೆಗೊಳ್ಳಲಿದ್ದು, ನಂತರ ನೂತನ ಆಡಳಿತ ಮಂಡಳಿ ಘಟನೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು