6:51 PM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ತಲವಾರು ದಾಳಿ ಪ್ರಕರಣ: ಕಾವೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

22/08/2023, 19:18

ಮಂಗಳೂರು(reporterkarnataka.com): ನಗರದ ಕಾವೂರು ಬಳಿ ಸ್ಕೂಟಿಯಲ್ಲಿ ಬಂದು ತಲವಾರು ದಾಳಿ ನಡೆಸಲು ಯತ್ನಿಸಿದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು
ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್‌ ಕ್ಷಿಪ್ರ ಕಾರ್ಯಾಚರಣೆಯಿಂದ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳ ದಸ್ತಗಿರಿ ಮಾಡಲಾಗಿದೆ.
ಆಗಸ್ಟ್ 20ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂ.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ಚಂದ್ರಹಾಸ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬೀಸಿದ್ದಾರೆ. ಅದೃಷ್ಟವರ ಪಿರ್ಯಾದಿಯು ತಪ್ಪಿಸಿಕೊಂಡಿದ್ದು ಆದರೆ ಮುಖಕ್ಕೆ ಗಾಯವಾಗಿರುತ್ತದೆ. ಅದರಂತೆ ಕಾವೂರು ಪೊಲೀಸ್‌ ಕಾರ್ಯಪೃವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್‌, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಎಸಿಪಿ ಮನೋಜ್ ಕುಮಾರ್ ರವರ ಸಲಹೆಯಂತೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೃತ್ಯಕ್ಕೆ ಬಳಸಿದ ತಲವಾರು, ವಾಹನ ಮತ್ತು ಆರೋಪಿತರನ್ನು ಬಂಧಿಸುವಲ್ಲಿ ಕಾವೂರು ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು