5:55 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತಲವಾರು ದಾಳಿ ಪ್ರಕರಣ: ಕಾವೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

22/08/2023, 19:18

ಮಂಗಳೂರು(reporterkarnataka.com): ನಗರದ ಕಾವೂರು ಬಳಿ ಸ್ಕೂಟಿಯಲ್ಲಿ ಬಂದು ತಲವಾರು ದಾಳಿ ನಡೆಸಲು ಯತ್ನಿಸಿದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು
ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್‌ ಕ್ಷಿಪ್ರ ಕಾರ್ಯಾಚರಣೆಯಿಂದ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳ ದಸ್ತಗಿರಿ ಮಾಡಲಾಗಿದೆ.
ಆಗಸ್ಟ್ 20ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂ.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ಚಂದ್ರಹಾಸ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬೀಸಿದ್ದಾರೆ. ಅದೃಷ್ಟವರ ಪಿರ್ಯಾದಿಯು ತಪ್ಪಿಸಿಕೊಂಡಿದ್ದು ಆದರೆ ಮುಖಕ್ಕೆ ಗಾಯವಾಗಿರುತ್ತದೆ. ಅದರಂತೆ ಕಾವೂರು ಪೊಲೀಸ್‌ ಕಾರ್ಯಪೃವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್‌, ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಎಸಿಪಿ ಮನೋಜ್ ಕುಮಾರ್ ರವರ ಸಲಹೆಯಂತೆ ಪ್ರಕರಣದ ತನಿಖೆಯನ್ನು ಕೈಗೊಂಡು, ಕೃತ್ಯಕ್ಕೆ ಬಳಸಿದ ತಲವಾರು, ವಾಹನ ಮತ್ತು ಆರೋಪಿತರನ್ನು ಬಂಧಿಸುವಲ್ಲಿ ಕಾವೂರು ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು