9:51 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಜೋಕೆ: ಪಾಲಿಕೆಯಿಂದ ದಂಡ ವಸೂಲು

24/08/2023, 13:49

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟುಮಾಡುತ್ತಿದ್ದು, ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಆದ್ದರಿಂದ ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿದೆ.
ಇನ್ನು ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು