2:09 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಬಿಜೆಪಿ ನಡೆಸುವ ಸೌಜನ್ಯ ಪರ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ: ಡಿವೈಎಫ್ ಐ ಪ್ರಶ್ನೆ

24/08/2023, 21:57

ಮಂಗಳೂರು(reporterkarnataka.com): ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬಿದ ನಂತರ ಬಿಜೆಪಿ ಹೋರಾಟಕ್ಕಿಳಿದಿದೆ. ಬಿಜೆಪಿ ಹೋರಾಟದಲ್ಲಿ ಸಂಸದ ಡಾ. ವೀರೇಂದ್ರ ಹೆಗ್ಗಡೆ ಭಾಗವಹಿಸುತ್ತಾರೆಯೇ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಪ್ರಶ್ನಿಸಿದ್ದಾರೆ. ಅವರು ಗುರುವಾರ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಆಗಸ್ಟ್ 28ರಂದು ಸೌಜನ್ಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ನಡೆಯಲಿರುವ ಬೆಳ್ತಂಗಡಿ ಚಲೋ ಬೆಂಬಲಿಸಿ ನಗರದಲ್ಲಿ ಜರುಗಿದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸೌಜನ್ಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎಡಪಂಥೀಯರು ನಿರಂತರ ಹೋರಾಟದಲ್ಲಿದ್ದಾರೆ. ಸೌಜನ್ಯ ಹೋರಾಟ ರಾಜ್ಯಕ್ಕೆ ಹಬ್ಬುತ್ತಿರುವಾಗ ಬಿಜೆಪಿ ಹೋರಾಟದ ನಾಟಕ ಮಾಡುತ್ತಿದೆ. ಜಿಲ್ಲೆಯ ವಿದ್ಯಾರ್ಥಿ ಯುವಜನರು 28ರ ಬೆಳ್ತಂಗಡಿ ಚಲೋ ಹೋರಾಟ ಬೆಂಬಲಿಸಬೇಕೆಂದು ಕರೆ ನೀಡಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಸಂಘಟನೆಯ ಸಂಚಾಲಕಿ ಮಂಜುಳಾ ನಾಯಕ್ ಮಾತನಾಡಿದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲರಾದ ನಿತಿನ್ ಕುತ್ತಾರ್, ನವೀನ್ ಕೊಂಚಾಡಿ, ರಫೀಕ್ ಹರೇಕಳ, ತಯ್ಯೂಬ್ ಬೆಂಗ್ರೆ, ಜಗದೀಶ್ ಬಜಾಲ್, ಭಾರತ ವಿದ್ಯಾರ್ಥಿ ಫೆಡರೇಶನ್ ನ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ಪ್ರಥಮ್ ಬಜಾಲ್, ಮಾದುರಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು