2:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅತ್ಯಾಚಾರ, ಕೊಲೆಗೀಡಾದ ಸೌಜನ್ಯ ಪರ ಮಹಾಧರಣಿಯಲ್ಲಿ ಭಾಗವಹಿಸಲು ಎಐಟಿಯುಸಿ ಕರೆ

26/08/2023, 11:03

ಮಂಗಳೂರು(reporterkarnataka.com): ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಅಪನಂಬಿಕೆಗೆ ಕಾರಣವಾದ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳು ಆಗಸ್ಟ್ 28 ರಂದು ನಡೆಸುವ ಮಹಾಧರಣಿಯಲ್ಲಿ ಎಐಟಿಯುಸಿಯ ಸದಸ್ಯರು ಹಾಗೂ ಕಾರ್ಮಿಕ ವರ್ಗ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಕರೆ ನೀಡಿದೆ.
ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚುವ ಬದಲು ನಿರಪರಾಧಿ ಸಂತೋಷ್ ರಾವ್‍ನನ್ನು ಫಿಕ್ಸ್ ಮಾಡಿ ಆತನ ಬದುಕುವ ಹಕ್ಕನ್ನು ಕಸಿಯಲಾಗಿದೆ. ಸೌಜನ್ಯ ಪ್ರಕರಣದಲ್ಲಿ ಪ್ರಾರಂಭಿಕ ಹಂತದಲ್ಲಿ ಸಂಗ್ರಹಿಸಬೇಕಾದ ಸಾಕ್ಷಾಧಾರಗಳನ್ನು ಕಾನೂನುಬದ್ದವಾಗಿ ಸಂಗ್ರಹಿಸದೆ, ಸುಸಮಯದಲ್ಲಿ ಸಾಕ್ಷ್ಯ ಮಾದರಿಗಳನ್ನು ಪರಿಶೋಧಿಸದೆ ಈ ಪ್ರಕರಣ ಮುಚ್ಚಿಹೋಗಲು ಕುಕೃತ್ಯವೆಸಗಿದ ಅಧಿಕಾರಿಗಳನ್ನು ಹಾಗೂ ಅವರ ಕುಕೃತ್ಯಕ್ಕೆ ಒತ್ತಡ ಹೇರಿದ ಕಾಣದ ಕುಳಗಳನ್ನು ಸೂಕ್ತ ತನಿಖೆಗೆ ಒಳಪಡಿಸಿದರೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯ. ಈ ಮಹಾಧರಣಿಯಲ್ಲಿ ನಾವೆಲ್ಲರೂ ಭಾಗವಹಿಸಿ ಸೌಜನ್ಯ ಪ್ರಕರಣ ಸೇರಿದಂತೆ ಈ ಹಿಂದೆ ನಡೆದ ಪದ್ಮಲತಾ, ಆನೆ ಮಾವುತರ ಕೊಲೆ ಪ್ರಕರಣಗಳನ್ನು ಸರಕಾರ ಮರುತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಆ ಮೂಲಕ ಸ್ವಾಸ್ಥ್ಯ ಮತ್ತು ನಿರ್ಬೀತಿ ಸಮಾಜ ನಿರ್ಮಿಸಲು ಮಹಾಜನತೆ ಬದ್ಧರಾಗಬೇಕೆಂದು ಎಐಟಿಯುಸಿ ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿಯ ಪರವಾಗಿ ಅಧ್ಯಕ್ಷರಾದ ಹೆಚ್.ವಿ ರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಎಸ್.ಬೇರಿಂಜ ಕಾರ್ಮಿಕರಿಗೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು