2:09 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಐತಿಹಾಸಿಕ ಕದ್ರಿ ಜೋಗಿ ಮಠದಲ್ಲಿ ಶ್ರೀ ಕಾಲಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

27/08/2023, 19:13

ಮಂಗಳೂರು(reporterkarnataka.com):ನಗರದ ಕದ್ರಿಯಲ್ಲಿರುವ ಐತಿಹಾಸಿಕ ಜೋಗಿ ಮಠದಲ್ಲಿ ಶ್ರೀ ಕಾಲ ಬೈರವ ದೇವರ ಮೂಲಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಭಾನುವಾರ ಜೋಗಿ ಸಮಾಜದ ಆಶ್ರಯದಲ್ಲಿ ಉಪವಾಸ ಸತ್ಯಾಗ್ರಹವನ್ನು ಭಜನೆಯ ಮೂಲಕ ನಡೆಸಲಾಯಿತು.
ಕದ್ರಿ ಜೋಗಿಮಠ ಹಿತರಕ್ಷಣಾ ಸಮಿತಿ, ದಕ್ಷಿಣ ಕನ್ನಡ ಜೋಗಿ ಸಮಾಜ ಸುಧಾರಕ ಸಂಘ, ಕದ್ರಿ ಶ್ರೀ ಜೋಗಿಮಠ ಜೀರ್ಣೋದ್ಧಾರ ಮತ್ತು ನಿರ್ವಹಣಾ ಸಮಿತಿಯ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.
ಕಾಲಭೈರವದೇವರಿಗೆ ಬ್ರಹ್ಮಕಲಶೋತ್ಸವ ಹಾಗೂ ಮೂರ್ತಿ ಪುನಃ ಪ್ರತಿಷ್ಠಾಪನೆ ಕಳೆದ ಫೆಬ್ರವರಿಯಲ್ಲಿ ನಡೆದಿದ್ದು, ಸಾವಿರಾರು ವರ್ಷ ಇತಿಹಾಸ ಇರುವ ಮೂಲ ಮೂರ್ತಿಯನ್ನು ಬಿಟ್ಟು ಯಾರೋ ಮಾರ್ವಾಡಿಗಳು ಕೊಡಮಾಡಿದ ಅಮೃತ ಶಿಲೆಯನ್ನು ಇಟ್ಟು ಬ್ರಹ್ಮಕಲಶ ಮಾಡಿದ್ದು, ಬಹುದೊಡ್ಡ ಅಪಚಾರವಾಗಿದೆ. ತಕ್ಷಣ ಈ ಬಗ್ಗೆ ಪುರಾ ತತ್ವ ಇಲಾಖೆ ನೀಡಿದ ಆದೇಶ ಜಾರಿ ಮಾಡಿ ಶ್ರೀ ಕಾಲಬೈರವ ದೇವರ ಮೂಲ ಮೂರ್ತಿ ಪ್ರತಿಷ್ಠಾಪನೆ ಆಗಬೇಕು ಎಂದು ಹರಿನಾಥ್ ಜೋಗಿ ಒತ್ತಾಯಿಸಿದರು.
ಈಗಿನ ನಿರ್ಮಲನಾಥ ಸ್ವಾಮೀಜಿ ಮಠಾಧಿಪತಿಗಳು ಕಾಲಬೈರವನ ಆರಾಧಕರಾದ ಸ್ಥಳೀಯ ಜೋಗಿ ಸಮಾಜದ ಬಂಧುಗಳ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ.
ರಾಜಸ್ಥಾನದ ಭಕ್ತರು ಹಾಗೂ ಕೆಲವರು ಸೇರಿಕೊಂಡು ಪುರಾತನ ಕಾಲದಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾಲಭೈರವ ದೇವರ ವಿಗ್ರಹವನ್ನು ಬಟ್ಟೆಯಲ್ಲಿ ಸುತ್ತಿ ಬಿಸಾಡಿದ್ದರು. ಯಾವುದೇ ವಿಧಿವಿಧಾನ ಅನುಸರಿಸದೆ ಚೀಲದಿಂದ ತೆಗೆದು ಹೊಸ ವಿಗ್ರಹ ಕೂರಿಸಿದ್ದಾರೆ. ಮಠ ಜೋಗಿ ಸಮುದಾಯಕ್ಕೆ ಸೇರಿದ್ದು, ಮಠಾಧೀಶರ ನಿರ್ದೇಶನದಲ್ಲಿ ಜೋಗಿಗಳೇ ಪ್ರತಿನಿತ್ಯ ಪೂಜೆ ನಡೆಸಬೇಕು ಎಂದರು.


ಹಳೆಯ ಕಾಲಭೈರವ ದೇವರ ವಿಗ್ರಹವನ್ನು ಮಠಾಧಿಪತಿಗಳು ಮಾರಾಟಕ್ಕೆ ಯತ್ನಿಸಿದ್ದರು. ನಾವು ಪ್ರಾಚ್ಯವಸ್ತು ಇಲಾಖೆಯನ್ನು ಸಂಪರ್ಕಿಸಿ ಮಾರಾಟ ತಡೆದಿದ್ದೇವೆ. ಮೊದಲಿನ ವಿಗ್ರಹವನ್ನೇ ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಬೇಸತ್ತು ಉಪವಾಸ ಸತ್ಯಾಗ್ರಹ ಮಾಡಿದ್ದೇವೆ. ಇದು ಸಾಂಕೇತಿಕವಾಗಿದ್ದು ಬೇಡಿಕೆ ಈಡೇರದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುದು ಎಂದರು.
ಕದ್ರಿ ಜೋಗಿ ಮಠ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣ ಸಮಿತಿ ಕಾರ್ಯದರ್ಶಿ ಹರೀಶ್ ಎಸ್.ಜೋಗಿ, ಸಮಾಜದ ಪ್ರಮುಖರಾದ ಕೆ. ದಯಾನಂದ ಜೋಗಿ, ಬಾಲಕೃಷ್ಣಕದ್ರಿ, ನಾಗೇಂದ್ರ ಚಿಲಿಂಬಿ, ಸತೀಶ್ ಜೋಗಿ ಮಾಲೆಮಾರ್, ವಿದ್ಯಾ ಗಣೇಶ್, ಶರತ್ ಕುಮಾರ್,ಜಗಜೀವನ್ ದಾಸ್,ಸುರೇಶ್ ಕುಮಾರ್, ನಾಗೇಶ್, ಗಣೇಶ್, ಕಾನೂನು ಸಲಹೆಗಾರರಾದ ಹರೀಶ್ ಎಸ್., ಮೋಹನ್, ಜಯಂತ್ ಜೋಗಿ, ದಯಾನಂದ ಜೋಗಿ, ಪ್ರಮಿತ್ ಜೋಗಿ ಮತ್ತಿತರ ಪದಾಧಿಕಾರಿಗಳು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು