9:38 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಮೂಡುಬಿದಿರೆ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

28/08/2023, 14:12

ಮೂಡುಬಿದರೆ(reporterkarnataka.com): ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.


ಜನಜಾಗ್ರತಿ ವೇದಿಕೆಯ ಮೂಡುಬಿದಿರೆ ವಲಯ ಅಧ್ಯಕ್ಷರಾದ ಜೊಸ್ಸಿ ಮಿನೇಜಸ್ ಅಧ್ಯಕ್ಷತೆ ವಹಿಸಿದರು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ತಾನು ಮಾತ್ರ ನರಕಯಾತನೆ ಅನುಭವಿಸಿದರೆ ದುಶ್ಚಟ ಇರುವ ವ್ಯಕ್ತಿಯ ಮನೆಯಲ್ಲಿ ಎಲ್ಲರೂ ನರಕಯಾತನೆ ಅನುಭವಿಸಬೇಕಾಗುತ್ತದೆ. ಇಂತಹ ದುಶ್ಚಟದ ದಾಸರಾಗದೇ ಜೀವನದಲ್ಲಿ ಉನ್ನತ ಸಾಧನೆ ಮಾಡಿ ಈ ಸಮಾಜಕ್ಕೆ ಕೀರ್ತಿ ತರುವಂತಹ ವ್ಯಕ್ತಿಗಳು ನೀವಾಗಬೇಕು ಇದೆಲ್ಲವೂ ಮದ್ಯವ್ಯಸನಿಯ ಮನಪರಿವರ್ತನೆಯಿಂದ ಮಾತ್ರ ಸಾಧ್ಯ ಎಂದರು. ತಾಲೂಕು ಯೋಜನಾಧಿಕಾರಿ ಸುನಿತಾ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಗತಿ ಬಂಧು ಒಕ್ಕೂಟದ ವಲಯ ಅಧ್ಯಕ್ಷರಾದ ಶ್ರೀಯುತ ಅರುಣ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖೋಪಧ್ಯಾಯ ಶ್ರೀಯುತ ಮುನಿರಾಜ್ ರೆಂಜಾಳ ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದುಷ್ಟಟಗಳಿಂದ ದೂರವಿರುವ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ. ಇಂದಿನ ಯುವಜನತೆ ಒಳ್ಳೆಯ ಹವ್ಯಾಸಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕನಾಗಿ ಹೊರಹೊಮ್ಮಬೇಕು. ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟ ದುರಭ್ಯಾಸದ ದಾಸರಾಗದೆ ತಂದೆ ತಾಯಿಯವರು ಕಂಡಿರುವ ಕನಸನ್ನು ನನಸು ಮಾಡಲು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂಡುಬಿದಿರೆ ವಲಯದ ಮೇಲ್ವಿಚಾರಕರಾದ ಮಮತಾ, ಮೂಡುಬಿದಿರೆ ವಲಯ ಪ್ರಾಂತ್ಯ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ಅನುಪಮಾ, ಮೂಡುಬಿದಿರೆ ವಲಯ ಜ್ಯೋತಿನಗರ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರಮಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಗಣಕಯಂತ್ರ ವಿಜ್ಞಾನ ಉಪನ್ಯಾಸಕಿ ನವಿತಾ ವಂದನಾರ್ಪಣೆ ಸಲ್ಲಿಸಿದರು.
– ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್

ಇತ್ತೀಚಿನ ಸುದ್ದಿ

ಜಾಹೀರಾತು