5:06 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮುದ್ರಾಂಕ ಶುಲ್ಕ ಏರಿಕೆಯಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ: ಶಾಸಕ ವೇದವ್ಯಾಸ ಕಾಮತ್

30/08/2023, 22:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಹಾಕಲು ಹೊರಟಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ನಿವೇಶನ, ಕಟ್ಟಡ, ಭೂಮಿ ಸೇರಿ ಸ್ಥಿರಾಸ್ತಿಯ ಮಾರ್ಗಸೂಚಿ ದರವನ್ನು ಮುಂದಿನ ಅಕ್ಟೋಬರ್ 1 ರಿಂದ ಹೆಚ್ಚಿಸಲು ಕಂದಾಯ ಇಲಾಖೆ ನಿರ್ಧರಿಸಿದೆ. ಕನಿಷ್ಠ ಶೇ.20ರಿಂದ ಶೇ.30ರ ವರೆಗೆ ದರ ಪರಿಷ್ಕರಣೆ ಆಗುವ ಬಗ್ಗೆ ಚರ್ಚೆ ನಡೆದಿದೆ. ಇಷ್ಟೊಂದು ದೊಡ್ಡ ಮಟ್ಟಿನ ದರ ಪರಿಷ್ಕರಣೆ ರಾಜ್ಯದ ಜನರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳಲಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿರುವ ಸರಕಾರ ಜನರಿಗೆ ಪರೋಕ್ಷವಾಗಿ ಆರ್ಥಿಕ ಹೊರೆ ಹೊರಿಸುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಬಡ ಹಾಗೂ ಮಧ್ಯಮ ವರ್ಗದ ಜನರು ಸಾಮಾನ್ಯವಾಗಿ ಸಾಲ ಸೋಲ ಮಾಡಿ ಆಸ್ತಿ, ನಿವೇಶ ಅಥವಾ ಮನೆ ಖರೀದಿಸುತ್ತಾರೆ. ಆದರೆ ಅಂತಹಾ ಕುಟುಂಬದವರಿಗೆ ಮುಂದೆ ಮುದ್ರಾಂಕ ಶುಲ್ಕ ಏರಿಕೆಯಿಂದ ತೀವ್ರ ಸಮಸ್ಯೆ ಆಗಲಿದೆ. ಬಹುತೇಕರಿಗೆ ಆಸ್ತಿ ಖರೀದಿ ಕೈಗೆಟಕದಂತೆ ಆಗಲಿದೆ. ಆದ್ದರಿಂದ ದರ ಪರಿಷ್ಕರಣೆಯನ್ನು ಕೈ ಬಿಟ್ಟು ಜನಸಾಮಾನ್ಯರ ಒಳಿತಿನ ಬಗ್ಗೆ ಚಿಂತಿಸಿ ಮುಂದುವರಿಯಬೇಕು ಎಂದು ಶಾಸಕ ಕಾಮತ್ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು