4:05 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮುದ್ರಾಂಕ ಶುಲ್ಕ ಏರಿಕೆಯಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ: ಶಾಸಕ ವೇದವ್ಯಾಸ ಕಾಮತ್

30/08/2023, 22:24

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಹಾಕಲು ಹೊರಟಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ನಿವೇಶನ, ಕಟ್ಟಡ, ಭೂಮಿ ಸೇರಿ ಸ್ಥಿರಾಸ್ತಿಯ ಮಾರ್ಗಸೂಚಿ ದರವನ್ನು ಮುಂದಿನ ಅಕ್ಟೋಬರ್ 1 ರಿಂದ ಹೆಚ್ಚಿಸಲು ಕಂದಾಯ ಇಲಾಖೆ ನಿರ್ಧರಿಸಿದೆ. ಕನಿಷ್ಠ ಶೇ.20ರಿಂದ ಶೇ.30ರ ವರೆಗೆ ದರ ಪರಿಷ್ಕರಣೆ ಆಗುವ ಬಗ್ಗೆ ಚರ್ಚೆ ನಡೆದಿದೆ. ಇಷ್ಟೊಂದು ದೊಡ್ಡ ಮಟ್ಟಿನ ದರ ಪರಿಷ್ಕರಣೆ ರಾಜ್ಯದ ಜನರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳಲಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿರುವ ಸರಕಾರ ಜನರಿಗೆ ಪರೋಕ್ಷವಾಗಿ ಆರ್ಥಿಕ ಹೊರೆ ಹೊರಿಸುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಬಡ ಹಾಗೂ ಮಧ್ಯಮ ವರ್ಗದ ಜನರು ಸಾಮಾನ್ಯವಾಗಿ ಸಾಲ ಸೋಲ ಮಾಡಿ ಆಸ್ತಿ, ನಿವೇಶ ಅಥವಾ ಮನೆ ಖರೀದಿಸುತ್ತಾರೆ. ಆದರೆ ಅಂತಹಾ ಕುಟುಂಬದವರಿಗೆ ಮುಂದೆ ಮುದ್ರಾಂಕ ಶುಲ್ಕ ಏರಿಕೆಯಿಂದ ತೀವ್ರ ಸಮಸ್ಯೆ ಆಗಲಿದೆ. ಬಹುತೇಕರಿಗೆ ಆಸ್ತಿ ಖರೀದಿ ಕೈಗೆಟಕದಂತೆ ಆಗಲಿದೆ. ಆದ್ದರಿಂದ ದರ ಪರಿಷ್ಕರಣೆಯನ್ನು ಕೈ ಬಿಟ್ಟು ಜನಸಾಮಾನ್ಯರ ಒಳಿತಿನ ಬಗ್ಗೆ ಚಿಂತಿಸಿ ಮುಂದುವರಿಯಬೇಕು ಎಂದು ಶಾಸಕ ಕಾಮತ್ ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು