2:29 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು 

25/07/2021, 12:34

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು.

ಅಥಣಿ ತಾಲೂಕಿನ ಹಲ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಎತ್ತ ಕಣ್ಣು ಹಾಯಿಸಿದರೂ ಕೆಂಪು ಜಲರಾಶಿ. ಎಂಥಹ ಧೈರ್ಯವಂತನ ಎದೆಯಲ್ಲಿ ತಲ್ಲಣ ಉಂಟು ಮಾಡುವ ಸನ್ನಿವೇಶ. ಇಂತಹ ಭೀಕರ ಸನ್ನಿವೇಶದಲ್ಲಿ ಸೇತುವೆ ಮೇಲೆ ಸಿಕ್ಕಿಹಾಕಿಕೊಂಡ ಒಂಟಿ ಮಹಿಳೆಯೊಬ್ಬರನ್ನು ಅಥಣಿ ಪೊಲೀಸರು ಬಚಾವ್ ಮಾಡಿದ್ದಾರೆ.

ವಿಠ್ಠಲ್ ಹುಲಿಕಟ್ಟಿ ಅವರು ಮಾನವಿಯತೆ ಮೆರೆದ ತಾಯಿ ಹೃದಯದ ಅಧಿಕಾರಿ. ಇವರು ಅಥಣಿ  ಪಿಎಸ್ಐ ಕುಮಾರ್ ಹಾಡ್ಕರ್ ಅವರ ನೆರವಿನಿಂದ ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೋಗಿದ್ದಾರೆ.

ಪ್ರವಾಹದ ಭೀತಿಯಿಂದ ತಮ್ಮ ಗ್ರಾಮಗಳಿಂದ ಸುರಕ್ಷಿತ ಸ್ಥಳಗಳಿಗೆ  ದರುರ್, ನದಿ ಇಂಗಳಗಾವ್ ,ಸಪ್ತ ಸಾಗರ ಗ್ರಾಮಸ್ಥರು ಈಗಾಗಲೇ ಗುಳೆ ಹೊರಟಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮಹಿಳೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರವಾಹದ ಭೀತಿ ಉಂಟಾದರೂ ತಾಲೂಕು ಆಡಳಿತ ಮಾತ್ರ ನಿರ್ಲಕ್ಷ್ಯವಹಿಸಿರುವುದು ಎದ್ದು ಕಾಣುತ್ತಿದೆ.

 ಇನ್ನಾದರೂ ಎಚ್ಚೆತ್ತುಕೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಆದಷ್ಟು ಬೇಗ ಸ್ಥಳಾಂತರ ಮಾಡುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು