12:50 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು 

25/07/2021, 12:34

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು.

ಅಥಣಿ ತಾಲೂಕಿನ ಹಲ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಎತ್ತ ಕಣ್ಣು ಹಾಯಿಸಿದರೂ ಕೆಂಪು ಜಲರಾಶಿ. ಎಂಥಹ ಧೈರ್ಯವಂತನ ಎದೆಯಲ್ಲಿ ತಲ್ಲಣ ಉಂಟು ಮಾಡುವ ಸನ್ನಿವೇಶ. ಇಂತಹ ಭೀಕರ ಸನ್ನಿವೇಶದಲ್ಲಿ ಸೇತುವೆ ಮೇಲೆ ಸಿಕ್ಕಿಹಾಕಿಕೊಂಡ ಒಂಟಿ ಮಹಿಳೆಯೊಬ್ಬರನ್ನು ಅಥಣಿ ಪೊಲೀಸರು ಬಚಾವ್ ಮಾಡಿದ್ದಾರೆ.

ವಿಠ್ಠಲ್ ಹುಲಿಕಟ್ಟಿ ಅವರು ಮಾನವಿಯತೆ ಮೆರೆದ ತಾಯಿ ಹೃದಯದ ಅಧಿಕಾರಿ. ಇವರು ಅಥಣಿ  ಪಿಎಸ್ಐ ಕುಮಾರ್ ಹಾಡ್ಕರ್ ಅವರ ನೆರವಿನಿಂದ ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೋಗಿದ್ದಾರೆ.

ಪ್ರವಾಹದ ಭೀತಿಯಿಂದ ತಮ್ಮ ಗ್ರಾಮಗಳಿಂದ ಸುರಕ್ಷಿತ ಸ್ಥಳಗಳಿಗೆ  ದರುರ್, ನದಿ ಇಂಗಳಗಾವ್ ,ಸಪ್ತ ಸಾಗರ ಗ್ರಾಮಸ್ಥರು ಈಗಾಗಲೇ ಗುಳೆ ಹೊರಟಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮಹಿಳೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರವಾಹದ ಭೀತಿ ಉಂಟಾದರೂ ತಾಲೂಕು ಆಡಳಿತ ಮಾತ್ರ ನಿರ್ಲಕ್ಷ್ಯವಹಿಸಿರುವುದು ಎದ್ದು ಕಾಣುತ್ತಿದೆ.

 ಇನ್ನಾದರೂ ಎಚ್ಚೆತ್ತುಕೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಆದಷ್ಟು ಬೇಗ ಸ್ಥಳಾಂತರ ಮಾಡುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು