7:47 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು 

25/07/2021, 12:34

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು.

ಅಥಣಿ ತಾಲೂಕಿನ ಹಲ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಎತ್ತ ಕಣ್ಣು ಹಾಯಿಸಿದರೂ ಕೆಂಪು ಜಲರಾಶಿ. ಎಂಥಹ ಧೈರ್ಯವಂತನ ಎದೆಯಲ್ಲಿ ತಲ್ಲಣ ಉಂಟು ಮಾಡುವ ಸನ್ನಿವೇಶ. ಇಂತಹ ಭೀಕರ ಸನ್ನಿವೇಶದಲ್ಲಿ ಸೇತುವೆ ಮೇಲೆ ಸಿಕ್ಕಿಹಾಕಿಕೊಂಡ ಒಂಟಿ ಮಹಿಳೆಯೊಬ್ಬರನ್ನು ಅಥಣಿ ಪೊಲೀಸರು ಬಚಾವ್ ಮಾಡಿದ್ದಾರೆ.

ವಿಠ್ಠಲ್ ಹುಲಿಕಟ್ಟಿ ಅವರು ಮಾನವಿಯತೆ ಮೆರೆದ ತಾಯಿ ಹೃದಯದ ಅಧಿಕಾರಿ. ಇವರು ಅಥಣಿ  ಪಿಎಸ್ಐ ಕುಮಾರ್ ಹಾಡ್ಕರ್ ಅವರ ನೆರವಿನಿಂದ ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೋಗಿದ್ದಾರೆ.

ಪ್ರವಾಹದ ಭೀತಿಯಿಂದ ತಮ್ಮ ಗ್ರಾಮಗಳಿಂದ ಸುರಕ್ಷಿತ ಸ್ಥಳಗಳಿಗೆ  ದರುರ್, ನದಿ ಇಂಗಳಗಾವ್ ,ಸಪ್ತ ಸಾಗರ ಗ್ರಾಮಸ್ಥರು ಈಗಾಗಲೇ ಗುಳೆ ಹೊರಟಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮಹಿಳೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರವಾಹದ ಭೀತಿ ಉಂಟಾದರೂ ತಾಲೂಕು ಆಡಳಿತ ಮಾತ್ರ ನಿರ್ಲಕ್ಷ್ಯವಹಿಸಿರುವುದು ಎದ್ದು ಕಾಣುತ್ತಿದೆ.

 ಇನ್ನಾದರೂ ಎಚ್ಚೆತ್ತುಕೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಆದಷ್ಟು ಬೇಗ ಸ್ಥಳಾಂತರ ಮಾಡುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು