7:48 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಖಾಸಗಿ ಬಸ್‌ಗಳಿಗೆ ಇನ್ನು ಮುಂದೆ ಡೋರ್ ಕಡ್ಡಾಯ: ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ

31/08/2023, 10:55

ಮಂಗಳೂರು(reporterkarnataka.com): ಇನ್ನು ಮುಂದೆ ಖಾಸಗಿ ಬಸ್ ಗಳಿಗೆ ಡೋರ್ ಕಡ್ಡಾಯವಾಗಲಿದೆ. ಮಂಗಳೂರು ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ನಗರದ ನಂತೂರಿನಲ್ಲಿ ಖಾಸಗಿ ಸಿಟಿ ಬಸ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನ ನಿರ್ವಾಹಕ ನಿಧನವಾದ ಹಿನ್ನಲೆಯಲ್ಲಿ ಎಲ್ಲಾ ಖಾಸಗಿ ಬಸ್‌ಗಳಿಗೆ ಇನ್ನು ಡೋರ್ ಕಡ್ಡಾಯವಾಗಿದೆ ಎಂದು ಪೊಲೀಸ್ ಕಮೀಷನರ್ ಆದೇಶ ನೀಡಿದ್ದಾರೆ.
ಕಂಡಕ್ಟರ್ ಸೇರಿ ಯಾರು ಕೂಡಾ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮೊದಲು ಕಾಯ್ದುಕೊಳ್ಳಿ ಎಂದು ಅವರು ತಿಳಿಸಿದ್ದಾರೆ.
ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದೆ. 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಕಂಡಕ್ಟರ್ ಅವರನ್ನು
ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದ್ದರು. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು