3:59 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಬಂದು ಇಳಿಯಿತು ಮೊದಲ ವಿಮಾನ: ಪ್ರಥಮ ಯಾನ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್

31/08/2023, 22:08

ಬೆಂಗಳೂರು(reporterkarnataka.com): ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಇಂದು ಮೊದಲ ಬಾರಿಗೆ ವಿಮಾನ ಬಂದು ಇಳಿಯಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಇಂದು ಆರಂಭಗೊಂಡಿತು.

ಮಾಜಿ ಮುಖ್ಯಮಂತ್ರಿ ಶಿವಮೊಗ್ಗ ಜೆಲ್ಲೆಯವರೇ ಆದ ಬಿ.ಎಸ್. ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರ, ವಿಜಯೇಂದ್ರ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಇನ್ನೂ ಹಲವರು ಶಿವಮೊಗ್ಗಕ್ಕೆ ತೆರಳುತ್ತಿರುವ ಮೊದಲ ವಿಮಾನ ಏರಿದರು.
ವಿಮಾನ ಹತ್ತುವ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಎಲ್ಲಾ ಗೌರವಗಳು ಇಲ್ಲಿನ ರೈತರಿಗೆ ಸಲ್ಲಬೇಕು. ಯಾವುದೇ ಅಡ್ಡಿ ಆತಂಕಗಳಿಲ್ಲದೆಯೇ ರೈತರು ಜಾಗ ಬಿಟ್ಟು ಕೊಟ್ಟ ಪರಿಣಾಮ ಶೀಘ್ರದಲ್ಲೇ ನಾವು ಏರ್ಪೋರ್ಟ್ ಮಾಡಲು ಸಾಧ್ಯವಾಯಿತು. ನಮಗೆ ಸಹಕಾರ ಕೊಟ್ಟ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಾವು ವಿಮಾನದಲ್ಲಿ ಇಬ್ಬರು ರೈತರನ್ನು ಕರೆದುಕೊಂಡು ಹೋಗುತ್ತಿದ್ದೇವೆ. ರೈತರ ಆಶೀರ್ವಾದದಿಂದಲೇ ಈ ಕೆಲಸ ಆಗಿದೆ ಎಂದರು.
ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಶಿವಮೊಗ್ಗಕ್ಕೆ ಮೊದಲ ವಿಮಾನ ಸೇವೆ ಪ್ರಾರಂಭವಾಗಿದೆ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಊರು ಶಿವಮೊಗ್ಗ ಆಗಿರುವುದರಿಂದ ಕುವೆಂಪು ವಿಮಾನ ನಿಲ್ದಾಣವೆಂದೇ ಹೆಸರಿಟ್ಟಿದ್ದೇವೆ. ಒಟ್ಟಾರೆಯಾಗಿ ಇದೊಂದು ಐತಿಹಾಸಿಕ ಕ್ಷಣ. ವಿಮಾನ ಆರಂಭದಿಂದ ಮಧ್ಯ ಕರ್ನಾಟಕಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು