2:15 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು