10:50 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು