10:21 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಗಜ ಪಡೆ: ಸಚಿವ ಈಶ್ವರ ಖಂಡ್ರೆ ವಿಧ್ಯುಕ್ತ ಚಾಲನೆ

01/09/2023, 15:16

ಮೈಸೂರು(reporterkarnataka.com): ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ. ಕಂಜನ್ ಈ ಬಾರಿ ದಸಾರಗೆ ಹೊಸ ಸೇರ್ಪಡೆಯಾಗಿದೆ. ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ.
ಒಂದೂವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾತನಾಡಿ, ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ನೀಡಿದ್ದಾರೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5 ಆನೆಗಳು ನಂತರ ಅರಮನೆಗೆ ಬರುತ್ತದೆ. ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ. ಧಾರ್ಮಿಕ ವಿಚಾರ, ರಾಜ್ಯಡಳಿತವನ್ನ ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಭಾರಿ ದಸರಾ ಆಚರಣೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು