6:25 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಗಜ ಪಡೆ: ಸಚಿವ ಈಶ್ವರ ಖಂಡ್ರೆ ವಿಧ್ಯುಕ್ತ ಚಾಲನೆ

01/09/2023, 15:16

ಮೈಸೂರು(reporterkarnataka.com): ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ. ಕಂಜನ್ ಈ ಬಾರಿ ದಸಾರಗೆ ಹೊಸ ಸೇರ್ಪಡೆಯಾಗಿದೆ. ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ.
ಒಂದೂವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾತನಾಡಿ, ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ನೀಡಿದ್ದಾರೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5 ಆನೆಗಳು ನಂತರ ಅರಮನೆಗೆ ಬರುತ್ತದೆ. ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ. ಧಾರ್ಮಿಕ ವಿಚಾರ, ರಾಜ್ಯಡಳಿತವನ್ನ ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಭಾರಿ ದಸರಾ ಆಚರಣೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು