5:37 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬಿ. ಎಲ್. ಸಂತೋಷ್ ಮೊದಲು ಬಿಜೆಪಿ ಶಾಸಕರನ್ನು ಉಳಿಸಿಕೊಳ್ಳಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ

01/09/2023, 18:54

ಹುಬ್ಬಳ್ಳಿ(reporterkarnataka.com): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಮೊದಲು ತಮ್ಮಶಾಸಕರನ್ನು ಉಳಿಸಿಕೊಳ್ಳಲಿ, ಮತ್ತೆ ಬೇರೆ ಪಕ್ಷದ 45 ಮಂದಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸಂತೋಷ್ ಹೇಳಿಕೆಗೆ ಮಾಧ್ಯವದವರಿಗೆ
ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.
ಸಂತೋಷ್ ನಾಳೆಯೇ ಆಪರೇಶನ್ ಕಮಲ ನಡೆಸಲಿ, ಎಷ್ಟು ಕಾಂಗ್ರೆಸ್ ನಾಯಕರನ್ನು ಅವರು ಸೆಳೆಯುತ್ತಾರೋ ನೋಡಿಬಿಡೋಣ ಎಂದು ಹಳೆಯ ಬಿಜೆಪಿಗರಾದ ಶೆಟ್ಟರ್ ಸವಾಲೆಸೆದರು.
ಕಾಂಗ್ರೆಸ್ ಪಕ್ಷದ್ದು 135 ಶಾಸಕರನ್ನೊಳಗೊಂಡ ಗಟ್ಟಿಮುಟ್ಟಾದ ಸರಕಾರ, ಇಂಥ ಸರಕಾರವನ್ನು ಯಾರು ತಾನೆ ಬಿಟ್ಟು ಹೋಗುವುದು ಸಾಧ್ಯ? ಎಂದು ಹೇಳಿದ ಶೆಟ್ಟರ್, ರಾಜ್ಯದಲ್ಲಿ ಬಿಜೆಪಿ ಒಂದು ಮುಳುಗುವ ಹಡಗಿನ ಸ್ಥಿತಿಯಲ್ಲಿದೆ, ಸಂತೋಷ್ ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು