12:36 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!!

02/09/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ
ಮಳೆಗಾಗಿ ಪ್ರಾರ್ಥಿಸಿದ್ದಾರೆ.


ಎನ್.ಆರ್.ಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನರಿಂದ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟದಲ್ಲಿ ಪೂಜೆ ನೆರವೇರಿಸಲಾಯಿತು. 37 ವರ್ಷದ ಹಿಂದೆಯೂ ಇದೇ ರೀತಿ ಮಳೆ ಅಭಾವ ಎದುರಾಗಿತ್ತು. ಆಗ ಪೂಜೆ ನೆರವೇರಿಸಲಾಗಿತ್ತು. ಗಂಗೇಗಿರಿ ಬೆಟ್ಟದಲ್ಲಿ ಪೂಜೆ ಮಾಡಿದರೆ ಮಳೆ ಬರುತ್ತೆ ಅನ್ನೋ ನಂಬಿಕೆ ಇದೆ. ಗಿರಿಯಲ್ಲಿ ಪೂಜೆ ಮಾಡಿ ಕಳಸದಲ್ಲಿ ಅಲ್ಲಿನ ನೀರು ತಂದು ಪೂಜೆ ಮಾಡಬೇಕು. 9 ದಿನ ಮಡಿಯಿಂದ ಪೂಜೆ ಮಾಡಿದರೆ ಮಳೆಯಾಗುತ್ತೆ ಅನ್ನೋ ಪ್ರತೀತಿ. ಗಂಗೇಗಿರಿಯಿಂದ ಜಲ ತಂದಿರೋ ಜನರಿಂದ 9 ದಿನ ಮಡಿ ಪೂಜೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು