7:05 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!!

02/09/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ
ಮಳೆಗಾಗಿ ಪ್ರಾರ್ಥಿಸಿದ್ದಾರೆ.


ಎನ್.ಆರ್.ಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನರಿಂದ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟದಲ್ಲಿ ಪೂಜೆ ನೆರವೇರಿಸಲಾಯಿತು. 37 ವರ್ಷದ ಹಿಂದೆಯೂ ಇದೇ ರೀತಿ ಮಳೆ ಅಭಾವ ಎದುರಾಗಿತ್ತು. ಆಗ ಪೂಜೆ ನೆರವೇರಿಸಲಾಗಿತ್ತು. ಗಂಗೇಗಿರಿ ಬೆಟ್ಟದಲ್ಲಿ ಪೂಜೆ ಮಾಡಿದರೆ ಮಳೆ ಬರುತ್ತೆ ಅನ್ನೋ ನಂಬಿಕೆ ಇದೆ. ಗಿರಿಯಲ್ಲಿ ಪೂಜೆ ಮಾಡಿ ಕಳಸದಲ್ಲಿ ಅಲ್ಲಿನ ನೀರು ತಂದು ಪೂಜೆ ಮಾಡಬೇಕು. 9 ದಿನ ಮಡಿಯಿಂದ ಪೂಜೆ ಮಾಡಿದರೆ ಮಳೆಯಾಗುತ್ತೆ ಅನ್ನೋ ಪ್ರತೀತಿ. ಗಂಗೇಗಿರಿಯಿಂದ ಜಲ ತಂದಿರೋ ಜನರಿಂದ 9 ದಿನ ಮಡಿ ಪೂಜೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು