7:31 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸೀನಿಯರ್ ಸಿಟಿಜನ್ ಗಳಿಗೆ ಬೈಯುವ ಖಾಸಗಿ ಬಸ್ ಕಂಡೆಕ್ಟರ್ ಗಳು: ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮದಲ್ಲಿ ಬಹಿರಂಗ

02/09/2023, 11:33

ಮಂಗಳೂರು(reporterkarnataka.com) ಬಸ್ಸು ಹತ್ತುವಾಗ, ಇಳಿಯುವಾಗ ಬಸ್ ನಿರ್ವಾಹಕರು ಬೈಯ್ಯುತ್ತಾರೆ ಎಂದು ಹಿರಿಯ ನಾಗರಿಕರೊಬ್ಬರು ನೊಂದು ದೂರು ನೀಡಿದ್ದಾರೆ.
ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ನಡೆದ ಪೋನ್ – ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು
ಈ ಆಘಾತಕ್ಕಾರಿ ದೂರನ್ನು ಸ್ವೀಕರಿಸಿದರು. ಸುಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಿರಿಯ ನಾಗರಿಕರೊಬ್ಬರು ನೋವಿನಿಂದ ಈ ದೂರನ್ನು ಫೋನ್- ಇನ್ ಕಾರ್ಯಕ್ರಮದಲ್ಲಿ ಮೌಖಿಕವಾಗಿ ದಾಖಲಿಸಿದ್ದಾರೆ. ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಕೂಡ ಸೀನಿಯರ್ ಸಿಟಿಜನ್ ಅವರ ದುಖಃ ದುಮ್ಮಾನಕ್ಕೆ ಸಕರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಸಾಮಾನ್ಯವಾಗಿ ಮಂಗಳೂರಿನ ಸಿಟಿ ಹಾಗೂ ಸರ್ವಿಸ್ ಬಸ್ ನ ಕೆಲವು ಕಂಡೆಕ್ಟರ್ ಗಳು ವಿದ್ಯಾರ್ಥಿ ಹಾಗೂ ಯುವ ಸಮುದಾಯದ ಜತೆ ಈ ರೀತಿ ದುರ್ವತನೆ ತೋರಿಸುವುದು ಆಗಾಗ ನಡೆಯುತ್ತಲೇ ಇರುತ್ತದೆ. ಆದರೆ ಅದೀಗ ಎಲ್ಲೆ ಮೀರಿ ವಯಸ್ಸಾದ ಹಿರಿಯ ನಾಗರಿಕರ ವರೆಗೆ ತಲುಪಿರುವುದು ಪೊಲೀಸ್ ಇಲಾಖೆಯನ್ನು ಒಂದು ಕ್ಷಣ ಚಿಂತಿಸುವಂತೆ ಮಾಡಿದೆ.
ಜಾರ್ಜ್ ಫೆರ್ನಾಂಡಿಸ್ ಎಂಬವರು ಕರೆ ಮಾಡಿ ನಗರದ ವೆಲೆನ್ಸಿಯಾದಲ್ಲಿ ಪಾದಚಾರಿಗಳು ಓಡಾಡುವ
ಫುಟ್ ಪಾತ್ ನಲ್ಲಿ ವಾಹನಗಳನ್ನು ನಿಲ್ಲಿಸುತ್ತಾರೆ. ನಮಗೆ ಸಮಸ್ಯೆ ಆಗುತ್ತಿದೆ ಎಂದು ಪೊಲೀಸ್ ಕಮಿಷನರ್ ಅವರ ಜತೆ ನಿವೇದಿಸಿಕೊಂಡಿದ್ದಾರೆ. ಹಾಗೆ ವೆಲೆನ್ಸಿಯಾದಲ್ಲಿ ಆ್ಯಂಬ್ಯುಲೆನ್ಸ್
ಡೋರ್ ಓಪನ್ ಮಾಡಿ ಒಳಗೆ ಕುಳಿತು ಕೊಳ್ತಾರೆ. ಅದು ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರು ಕೂಡ ಬಂದಿದೆ.
ಬಜಪೆ ಸಮೀಪದ ಮರವೂರಲ್ಲಿ ರಾತ್ರಿ ಹೊತ್ತು ಅಕ್ರಮವಾಗಿ ಹೊಯಿಗೆ ತೆಗೆಯುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಎಲ್ ಇಡಿ ಲೈಟ್ ಗಳಿಂದ ಹೆಚ್ಚಾಗಿ ಅಪಘಾತ ಸಂಭವಿಸುತ್ತಿದೆ ಎಂಬ ಕಳಕಳಿ ಕೂಡ ವ್ಯಕ್ತವಾಗಿದೆ. ಕುಂಜತ್ತ್ ಬೈಲ್ ಗೆ ಪರ್ಮಿಟ್ ಇದ್ದರೂ ಬಸ್ ಬರುವುದಿಲ್ಲ ಎಂಬ ದುಮ್ಮಾನ ಬಹಿರಂಗಗೊಂಡಿದೆ.
ಬೈಕಂಪಾಡಿ ಬಳಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳ
ಪಾರ್ಕಿಂಗ್ ಮಾಡುತ್ತಾರೆ ಎಂದು ಉರ್ವಸ್ಟೋರ್ ನಿಂದ ಸುರತ್ಕಲ್ ಗೆ ತೆರಳುವ ನಿತ್ಯ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು