11:04 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ

25/07/2021, 18:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ.

ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಅವರು ಈ ಬಾರಿ ಬಸವನಗೌಡ ತುರುವಿಹಾಳ ಅವರನ್ನು ಕೈಹಿಡಿದಿದ್ದಾರೆ ಎಂದು ಸಿಂಧನೂರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ವಿರುಪಾಪುರ ಗ್ರಾಮದಲ್ಲಿ ನೂತನ ಶಾಸಕರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ತುರುವಿಹಾಳ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಕಾರ್ಯಕರ್ತರು ಪ್ರತಿಯೊಂದು ಹಳ್ಳಿಗೆ ಹೋಗಿ ಮತದಾರರನ್ನು ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲಿನ ಸ್ಥಿತಿಗತಿಗಳು ತಿಳಿದುಕೊಂಡು ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಸ್ಕಿ ಕ್ಷೇತ್ರದ ದಿಕ್ಸೂಚಿ ಬದಲಾಯಿಸಿದ್ದಾರೆ. ಕೈಹಿಡಿದ ಮತದಾರರನ್ನು ನಾವು ಸ್ಮರಿಸಬೇಕು ಎಂದು ಬಾದರ್ಲಿ ಹೇಳಿದರು.

ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ,ನಿಮ್ಮ ಋಣವನ್ನು ನಾನು ತೀರಿಸುತ್ತೇನೆ. ನಿಮ್ಮ ಸಮಸ್ಯೆಗಳು ಸ್ಪಂದಿಸುತ್ತೇನೆ. ನನ್ನ ಮತದಾರರ ಅಭಿಮಾನಿಗಳೇ ನನ್ನ ದೇವರು ಎಂದರು.

ಸಿಂಧನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ವರ ಮಾತನಾಡಿ, ಹಲವರ ಪರಿಶ್ರಮದಿಂದ, ಜನರ ಬೆಂಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾರರನ್ನು ನಾವು ಸ್ಮರಿಸಲೇಬೇಕು. ಮುಂದಿನ ಬಾರಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಗುರಿ. ಮತದಾರರನ್ನು ನಾವು ಯಾವತ್ತು ಕೈಬಿಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು