10:57 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ

25/07/2021, 18:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ.

ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಅವರು ಈ ಬಾರಿ ಬಸವನಗೌಡ ತುರುವಿಹಾಳ ಅವರನ್ನು ಕೈಹಿಡಿದಿದ್ದಾರೆ ಎಂದು ಸಿಂಧನೂರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ವಿರುಪಾಪುರ ಗ್ರಾಮದಲ್ಲಿ ನೂತನ ಶಾಸಕರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ತುರುವಿಹಾಳ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಕಾರ್ಯಕರ್ತರು ಪ್ರತಿಯೊಂದು ಹಳ್ಳಿಗೆ ಹೋಗಿ ಮತದಾರರನ್ನು ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲಿನ ಸ್ಥಿತಿಗತಿಗಳು ತಿಳಿದುಕೊಂಡು ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಸ್ಕಿ ಕ್ಷೇತ್ರದ ದಿಕ್ಸೂಚಿ ಬದಲಾಯಿಸಿದ್ದಾರೆ. ಕೈಹಿಡಿದ ಮತದಾರರನ್ನು ನಾವು ಸ್ಮರಿಸಬೇಕು ಎಂದು ಬಾದರ್ಲಿ ಹೇಳಿದರು.

ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ,ನಿಮ್ಮ ಋಣವನ್ನು ನಾನು ತೀರಿಸುತ್ತೇನೆ. ನಿಮ್ಮ ಸಮಸ್ಯೆಗಳು ಸ್ಪಂದಿಸುತ್ತೇನೆ. ನನ್ನ ಮತದಾರರ ಅಭಿಮಾನಿಗಳೇ ನನ್ನ ದೇವರು ಎಂದರು.

ಸಿಂಧನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ವರ ಮಾತನಾಡಿ, ಹಲವರ ಪರಿಶ್ರಮದಿಂದ, ಜನರ ಬೆಂಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾರರನ್ನು ನಾವು ಸ್ಮರಿಸಲೇಬೇಕು. ಮುಂದಿನ ಬಾರಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಗುರಿ. ಮತದಾರರನ್ನು ನಾವು ಯಾವತ್ತು ಕೈಬಿಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು