1:00 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ: ಸಾಹಿತಿ ತುರುವೇಕೆರೆ ಪ್ರಸಾದ್

03/09/2023, 12:22

ಮಂಗಳೂರು(reporterkarnataka.com): ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ. ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂದು ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ಹೇಳಿದರು.
ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 14ನೇಯ ಆವೃತ್ತಿಯ 2023ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿ, ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ದರಾಗಿ ಮಾಡುವಂತೆ ಕರೆ ನೀಡಿದರು.

ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅಭಿನಂದನ ಮಾತುಗಳಾನ್ನಡಿದರು. ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ ದಾಗ “ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್. ಎಸ್., ಮೌಶೀರ್ ಅಹಮದ್ ಸಾಮಣಿಗೆ, ಡಾ. ಮೀನಾಕ್ಷಿ ರಾಮಚಂದ್ರ, ಪೊ. ಡಾ. ಝೀಟಾ ಲೋಬೊ, ಲೇಖಕ ಎನ್. ವಿ. ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು.
ಮಹೇಶ ಆರ್. ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವಚಿತ್ರ ಕಲಾವಿದೆ ಬೆಂಗಳೂರಿನ ಶಾರ್ವೀ ನಾೃಕ್ ಅವರನ್ನು ಅಭಿನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು