7:17 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ: ಸಾಹಿತಿ ತುರುವೇಕೆರೆ ಪ್ರಸಾದ್

03/09/2023, 12:22

ಮಂಗಳೂರು(reporterkarnataka.com): ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ. ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂದು ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ಹೇಳಿದರು.
ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 14ನೇಯ ಆವೃತ್ತಿಯ 2023ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ” ಸ್ವೀಕರಿಸಿ, ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ದರಾಗಿ ಮಾಡುವಂತೆ ಕರೆ ನೀಡಿದರು.

ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅಭಿನಂದನ ಮಾತುಗಳಾನ್ನಡಿದರು. ಈ ಸಂದರ್ಭದಲ್ಲಿ “ಮೊಹಬ್ಬತ್ ಕಾ ದಾಗ “ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್. ಎಸ್., ಮೌಶೀರ್ ಅಹಮದ್ ಸಾಮಣಿಗೆ, ಡಾ. ಮೀನಾಕ್ಷಿ ರಾಮಚಂದ್ರ, ಪೊ. ಡಾ. ಝೀಟಾ ಲೋಬೊ, ಲೇಖಕ ಎನ್. ವಿ. ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು.
ಮಹೇಶ ಆರ್. ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವಚಿತ್ರ ಕಲಾವಿದೆ ಬೆಂಗಳೂರಿನ ಶಾರ್ವೀ ನಾೃಕ್ ಅವರನ್ನು ಅಭಿನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು