11:12 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಅನಂತ ಅಭಿನಂದನೆ: ಕಡಲನಗರಿಯಲ್ಲಿ ನಟ ಅನಂತನಾಗ್ ದಂಪತಿಗೆ ಸಾರೋಟು ಮೆರವಣಿಗೆ

03/09/2023, 17:27

ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಸಂಭ್ರಮ ನೆಲೆಸಿತ್ತು. ವಿಶೇಷವಾಗಿ ಸಿಂಗರಿಸಿದ ಸಾರೋಟಿನಲ್ಲಿ
ಕುಳಿತ ಆ ದಂಪತಿಯ ನೋಡಲು ರಸ್ತೆಯ ಇಕ್ಕೆಲೆಗಳಲ್ಲಿ ಜನರು ಸೇರಿದ್ದರು.
ಸಾರೋಟು ಮೆರವಣಿಗೆ ಡೊಂಗರಕೇರಿಯಲ್ಲಿರುವ
ಕೆನರಾ ಹೈಸ್ಕೂಲಿನ ಮುಂಭಾಗದಿಂದ ಆರಂಭಗೊಂಡು ಮುಖ್ಯರಸ್ತೆಯ ಮೂಲಕಮೆರವಣಿಗೆ ಟಿ. ವಿ. ರಮಣ್ ಪೈ ಸಭಾಂಗಣಕ್ಕೆ ಆಗಮಿಸಿತು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಅನಂತನಾಗ್ ಅಭಿನಂದನಾ ಸಮಿತಿ ವತಿಯಿಂದ ಪ್ರಸಿದ್ಧ ಚಿತ್ರನಟ ಅನಂತನಾಗ್ ಅವರ 75ನೇ ವರ್ಷದ ಹುಟ್ಟುಹಬ್ಬ ಹಾಗೂ ವೃತ್ತಿಜೀವನದ 50ನೇ ವರ್ಷದ ಸಂಭ್ರಮಾಚರಣೆ‌ ಅನಂತ ಅಭಿನಂದನೆ ಕಾರ್ಯಕ್ರಮ ಇದಾಗಿತ್ತು.
ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲಿನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಅನಂತನಾಗ್ ಅವರು ಹಾರಾರ್ಪಣೆ ಮಾಡಿ ಶ್ರೇಷ್ಠ ಶಿಕ್ಷಣ ಮತ್ತು ಬ್ಯಾಂಕಿಂಗ್ ತಜ್ಞನಿಗೆ ಗೌರವ ಸಲ್ಲಿಸಿದರು.
ಸಾರೋಟಿನಲ್ಲಿ ಅನಂತನಾಗ್ ದಂಪತಿಯನ್ನು ಕುಳ್ಳಿರಿಸಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಟಿ ವಿ ರಮಣ್ ಪೈ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ದಾರಿಯುದ್ದಕ್ಕೂ ಹುಲಿವೇಷ‌ ಕುಣಿತ, ಸೆಕ್ಸಪೋನ್, ಬೊಂಬೆಗಳು, ಮಕ್ಕಳಿಂದ ಅನಂತನಾಗ್ ಸಿನೆಮಾ ಪಾತ್ರಗಳ ವೇಷಭೂಷಣ, ಬಾಜಾ ಭಜಂತ್ರಿಗಳ ಅಬ್ಬರದಲ್ಲಿ ಅನಂತನಾಗ್ ಅಭಿಮಾನಿಗಳು ಸಂಭ್ರಮಿಸಿದರು.
ಬೆಳಿಗ್ಗೆ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಅನಂತನಾಗ್ ಹಾಗೂ ಗಾಯತ್ರಿ ನಾಗ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಆ ಬಳಿಕ ನಡೆದ ಸಂವಾದದಲ್ಲಿ ಕಾಸರಗೋಡು ಚಿನ್ನಾ, ದಿನೇಶ್ ಮಂಗಳೂರು, ಲಕ್ಷ್ಮಣ್ ಕುಮಾರ್ ಮಲ್ಲೂರು, ಸದಾಶಿವ ಶೆಣೈ‌ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಮನೋಹರ್ ಪ್ರಸಾದ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು