6:31 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಅನಂತ ಅಭಿನಂದನೆ: ಕಡಲನಗರಿಯಲ್ಲಿ ನಟ ಅನಂತನಾಗ್ ದಂಪತಿಗೆ ಸಾರೋಟು ಮೆರವಣಿಗೆ

03/09/2023, 17:27

ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಸಂಭ್ರಮ ನೆಲೆಸಿತ್ತು. ವಿಶೇಷವಾಗಿ ಸಿಂಗರಿಸಿದ ಸಾರೋಟಿನಲ್ಲಿ
ಕುಳಿತ ಆ ದಂಪತಿಯ ನೋಡಲು ರಸ್ತೆಯ ಇಕ್ಕೆಲೆಗಳಲ್ಲಿ ಜನರು ಸೇರಿದ್ದರು.
ಸಾರೋಟು ಮೆರವಣಿಗೆ ಡೊಂಗರಕೇರಿಯಲ್ಲಿರುವ
ಕೆನರಾ ಹೈಸ್ಕೂಲಿನ ಮುಂಭಾಗದಿಂದ ಆರಂಭಗೊಂಡು ಮುಖ್ಯರಸ್ತೆಯ ಮೂಲಕಮೆರವಣಿಗೆ ಟಿ. ವಿ. ರಮಣ್ ಪೈ ಸಭಾಂಗಣಕ್ಕೆ ಆಗಮಿಸಿತು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಅನಂತನಾಗ್ ಅಭಿನಂದನಾ ಸಮಿತಿ ವತಿಯಿಂದ ಪ್ರಸಿದ್ಧ ಚಿತ್ರನಟ ಅನಂತನಾಗ್ ಅವರ 75ನೇ ವರ್ಷದ ಹುಟ್ಟುಹಬ್ಬ ಹಾಗೂ ವೃತ್ತಿಜೀವನದ 50ನೇ ವರ್ಷದ ಸಂಭ್ರಮಾಚರಣೆ‌ ಅನಂತ ಅಭಿನಂದನೆ ಕಾರ್ಯಕ್ರಮ ಇದಾಗಿತ್ತು.
ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲಿನಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪುತ್ಥಳಿಗೆ ಅನಂತನಾಗ್ ಅವರು ಹಾರಾರ್ಪಣೆ ಮಾಡಿ ಶ್ರೇಷ್ಠ ಶಿಕ್ಷಣ ಮತ್ತು ಬ್ಯಾಂಕಿಂಗ್ ತಜ್ಞನಿಗೆ ಗೌರವ ಸಲ್ಲಿಸಿದರು.
ಸಾರೋಟಿನಲ್ಲಿ ಅನಂತನಾಗ್ ದಂಪತಿಯನ್ನು ಕುಳ್ಳಿರಿಸಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಟಿ ವಿ ರಮಣ್ ಪೈ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ದಾರಿಯುದ್ದಕ್ಕೂ ಹುಲಿವೇಷ‌ ಕುಣಿತ, ಸೆಕ್ಸಪೋನ್, ಬೊಂಬೆಗಳು, ಮಕ್ಕಳಿಂದ ಅನಂತನಾಗ್ ಸಿನೆಮಾ ಪಾತ್ರಗಳ ವೇಷಭೂಷಣ, ಬಾಜಾ ಭಜಂತ್ರಿಗಳ ಅಬ್ಬರದಲ್ಲಿ ಅನಂತನಾಗ್ ಅಭಿಮಾನಿಗಳು ಸಂಭ್ರಮಿಸಿದರು.
ಬೆಳಿಗ್ಗೆ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಅನಂತನಾಗ್ ಹಾಗೂ ಗಾಯತ್ರಿ ನಾಗ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಆ ಬಳಿಕ ನಡೆದ ಸಂವಾದದಲ್ಲಿ ಕಾಸರಗೋಡು ಚಿನ್ನಾ, ದಿನೇಶ್ ಮಂಗಳೂರು, ಲಕ್ಷ್ಮಣ್ ಕುಮಾರ್ ಮಲ್ಲೂರು, ಸದಾಶಿವ ಶೆಣೈ‌ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಮನೋಹರ್ ಪ್ರಸಾದ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು