6:28 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಭಾರತ: ವಿಜ್ಞಾನಿ ಡಾ. ಆನಂದ್ ರಂಗನಾಥನ್ ಸಂತಸ

03/09/2023, 20:05

ಮಂಗಳೂರು(reporterkarnataka.com): ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗಪಡಿಸಿ ಮುನ್ನಡೆಯುವ ದೇಶವಾಗಿ ಮಾರ್ಪಾಡುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ. ಇಂದು ನಮ್ಮ ಮುಂದೆ ಬೇರೆ ಬೇರೆ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ ಮುಂದಿನ 25 ವರ್ಷಗಳು ನಿಜಕ್ಕೂ ಭಾರತದ ಇತಿಹಾಸದಲ್ಲಿ ಅಮೃತ ಕಾಲವಾಗಲಿದೆ ಎಂದು ಪ್ರಸಿದ್ಧ ವಿಜ್ಞಾನಿ, ಲೇಖಕ ಮತ್ತು ಸಂಶೋಧಕ ಡಾ. ಆನಂದ್ ರಂಗನಾಥನ್ ಹೇಳಿದರು.


ಅವರು ರಾಮಕೃಷ್ಣ ಮಿಷನ್ ಮಾರ್ಗದರ್ಶನ ದಲ್ಲಿ ಸ್ವಚ್ಛ ಮಂಗಳೂರು ಫೌಂಡೇಷನ್ ಮತ್ತು ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಂಗಳೂರು ರಾಮಕೃಷ್ಣ ಮಠದ ವಿವೇಕಾನಂದ ಸಭಾಭವನದಲ್ಲಿ ನಡೆದ “ಜಿಜ್ಞಾಸಾ” : ಸನಾತನ ಚಿಂತನ ಗಂಗಾ : ದ್ವೈಮಾಸ ಮೊದಲ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತ- 2047 ಅವಕಾಶಗಳ ಆಗರ” ಇದರ ಕುರಿತು ಮಾತನಾಡಿದರು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು ಮಂಗಳೂರು ರಾಮಕೃಷ್ಣ ಮಠ ಮತ್ತು ಮಿಷನ್ ಆಧ್ಯಾತ್ಮಿಕ , ಸಾಂಸ್ಕೃತಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಇತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದೆ. ಇದರೊಂದಿಗೆ ಸ್ವಚ್ಛ ಮಂಗಳೂರು ಫೌಂಡೇಶನ್ ಇದರ ಮೂಲಕ ಸ್ವಚ್ಛ ಮಂಗಳೂರು ಅಭಿಯಾನ ಆರಂಭದ ಕಾರ್ಯ ನಿಜಕ್ಕೂ ಶ್ಲಾಘನೀಯ ಮುಂದೆಯೂ ಇನ್ನಷ್ಟು ಉತ್ತಮ ಕಾರ್ಯಕ್ರಮಗಳು ಹೀಗೆ ಮುಂದುವರೆಯಲಿ ಮಂಗಳೂರಿನ ಜನತೆಗೆ ಉತ್ತಮ ಸೇವೆ ನೀಡಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಎನ್ ವಿನಯ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಜ್ಞಾಸಾದ ಸಂಯೋಜಕ ಮತ್ತು ಭಾರತೀಯ ಸೇನೆಯ ಅನುಭವಿ ಸೈನಿಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ ಸ್ವಾಗತಿಸಿ, ಜಿಜ್ಞಾಸಾದ ಸಹ ಸಂಯೋಜಕ ಮತ್ತು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಜಿಯೋಥೆರಫಿ ಇದರ ಪ್ರಾಂಶುಪಾಲ ಪ್ರೊ. ಧನೇಶ್ ಕುಮಾರ್ ವಂದಿಸಿ, ಐಶ್ವರ್ಯ ನಾಯರ್ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು