7:37 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಬಹರೈನ್ ನಲ್ಲಿ ಭೀಕರ ರಸ್ತೆ ಅಪಘಾತ: ಓಣಂ ಆಚರಿಸಿ ವಾಪಸ್ ಬರುತ್ತಿದ್ದ 5 ಮಂದಿ ಭಾರತೀಯರ ಸಾವು

03/09/2023, 22:27

ಮನಾಮಾ(reporterkarnataka.com): ಬಹರೈನ್’ನಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ 5 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ.
ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ ನಿವಾಸಿಗಳು ಹಾಗೂ ತೆಲಂಗಾಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರನ್ನು ವಿ.ಪಿ.ಮಹೇಶ್ (33), ಮಲಪ್ಪುರಂನ ನಿವಾಸಿ ಜಗತ್ ವಾಸುದೇವನ್ (26), ತ್ರಿಶೂರ್ ನ ಚಾಲಕುಡಿಯ ಜಾರ್ಜ್ (28), ಕಣ್ಣೂರಿನ ಅಖಿಲ್ ರಘು (28), ತೆಲಂಗಾಣದ ಸುಮನ್ ರಾಜಣ್ಣ (27) ಮೃತರು ಎಂದು ಗುರುತಿಸಲಾಗಿದೆ.
ಸಲ್ಮಾಬಾದ್ ನ ಗಲ್ಫ್ ಏರ್ ಕ್ಲಬ್ ನಲ್ಲಿ ಮುಹರಕ್ ಅಲ್ ಹಿಲಾಲ್ ಆಸ್ಪತ್ರೆ ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಪಾಲ್ಗೊಂಡ ನಂತರ ಐವರು ಕಾರಿನಲ್ಲಿ ವಾಪಸಾಗುತ್ತಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಐವರು ಆಸ್ಪತ್ರೆ ಯಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದು‌‌ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು