7:04 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ

03/09/2023, 23:08

ಬೆಂಗಳೂರು(reporterkarnataka.com):
ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಅಕಾಡೆಮಿಯು
ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ , ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.
ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.‌
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ , ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ಪ್ರಮುಖ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಮಾಧ್ಯಮಗಳಲ್ಲಿ ನಿರಂತರವಾಗಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಪಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು . ಎಂಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು, ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.‌

ಇತ್ತೀಚಿನ ಸುದ್ದಿ

ಜಾಹೀರಾತು