2:52 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ

03/09/2023, 23:08

ಬೆಂಗಳೂರು(reporterkarnataka.com):
ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಅಕಾಡೆಮಿಯು
ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ , ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.
ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.‌
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ , ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ಪ್ರಮುಖ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಮಾಧ್ಯಮಗಳಲ್ಲಿ ನಿರಂತರವಾಗಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಪಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು . ಎಂಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು, ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.‌

ಇತ್ತೀಚಿನ ಸುದ್ದಿ

ಜಾಹೀರಾತು