9:43 PM Friday8 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು 

25/07/2021, 19:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ.

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಇಡೀ ಅಥಣಿ ತಾಲೂಕಿನ ಇಂಗಳಗಾಂವ ಹುಲಗಬಾಳ, ಖವಟಕೊಪ್ಪ, ಪಿ ಕೆ ನಾಗನೂರ ಸೇರಿದಂತೆ ಹಲವು ಗ್ರಾಮಗಳ ತೋಟದ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತದಿಂದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಎರಡು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದಿದ್ದಾರೆ.


ಕೃಷ್ಣಾ ನದಿ ತೀರದ ಜನರು ಕಾಳಜಿ ಕೇಂದ್ರಗಳಿಗೆ ಬರುವ ಮೂಲಕ ಜೀವರಕ್ಷಣೆಗೆ ಆದ್ಯತೆ ಕೊಡಬೇಕು. ಸಂತ್ರಸ್ತರಿಗೆ ಸರ್ಕಾರದ ಸಮರ್ಪಕ ಪರಿಹಾರ ಸಿಗುವ ಭರವಸೆ ಇದ್ದು, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಆದಷ್ಟು ಬೇಗ ಗ್ರಾಮಗಳಿಂದ ಹೊರಗೆ ಬಂದು ಸುರಕ್ಷಿತ ತಾಣ ಸೇರಬೇಕೆಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು