4:16 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!!

04/09/2023, 10:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು.


ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಏರ್ಪಟ್ಟಿದ್ದು ಸಕಾಲಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ತಾಲೂಕಿನ ಅಡಹಳ್ಳಿ,ಕೋಹಳ್ಳಿ,ಕಕಮರಿ,ಐಗಳಿ ಸೇರಿದಂತೆ ಕೊಟ್ಟಲಗಿ ಭಾಗದಲ್ಲಿ ಕುಡಿಯುವ ನೀರಿಗೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದ್ದು ಕಿಲೋ ಮೀಟರಗಟ್ಟಲೆ ಸಂಚರಿಸಿ ಕುಡಿಯುವ ನೀರು ತರಬೇಕಾಗಿದ್ದು ಮಹಿಳೆಯರು,ಪುರುಷರು ನಿತ್ಯದ ದುಡಿಮೆ ನಿಲ್ಲಿಸಿ ನೀರಿಗಾಗಿ ಅಲೆಯುವಂತಾಗಿದೆ.
ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಅಥಣಿ ತಾಲೂಕಿನ ಕೆಲವು ಗ್ರಾಮಗಳನ್ನು ಬರಪೀಡಿತ ಗ್ರಾಮಗಳೆಂದು ಘೋಷಿಸಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕೊಡುವ ಮೂಲಕ ಸ್ಪಂದಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು