7:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!!

04/09/2023, 10:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು.


ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಏರ್ಪಟ್ಟಿದ್ದು ಸಕಾಲಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ತಾಲೂಕಿನ ಅಡಹಳ್ಳಿ,ಕೋಹಳ್ಳಿ,ಕಕಮರಿ,ಐಗಳಿ ಸೇರಿದಂತೆ ಕೊಟ್ಟಲಗಿ ಭಾಗದಲ್ಲಿ ಕುಡಿಯುವ ನೀರಿಗೆ ಜನರು ಪರದಾಡುವ ಪರಿಸ್ಥಿತಿ ಎದುರಾಗಿದ್ದು ಕಿಲೋ ಮೀಟರಗಟ್ಟಲೆ ಸಂಚರಿಸಿ ಕುಡಿಯುವ ನೀರು ತರಬೇಕಾಗಿದ್ದು ಮಹಿಳೆಯರು,ಪುರುಷರು ನಿತ್ಯದ ದುಡಿಮೆ ನಿಲ್ಲಿಸಿ ನೀರಿಗಾಗಿ ಅಲೆಯುವಂತಾಗಿದೆ.
ರಾಜ್ಯದ ಜನರಿಗೆ ವಿವಿಧ ಭಾಗ್ಯಗಳನ್ನು ಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಅಥಣಿ ತಾಲೂಕಿನ ಕೆಲವು ಗ್ರಾಮಗಳನ್ನು ಬರಪೀಡಿತ ಗ್ರಾಮಗಳೆಂದು ಘೋಷಿಸಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕೊಡುವ ಮೂಲಕ ಸ್ಪಂದಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು