8:21 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು