4:49 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್

04/09/2023, 23:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ.
3000 ಲಂಚ ಪಡೆಯುವಾಗ ಆರ್ ಟಿಒ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಟೆಂಡರ್ ಲತಾ ಹಾಗೂ ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.
ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆಯನ್ನು ಆರ್.ಟಿ.ಓ. ಅಧಿಕಾರಿ ಮಧುರಾ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಬೈಕ್ ಶಾಪ್ ಓನರ್ ಮನವಿ ಮಾಡಿದ್ದರು. 1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದರು.
ಫೈಲ್ ಪೆಂಡಿಂಗ್ ಇಟ್ಟಿದ್ದ ಆರ್ ಟಿಒ ಅಧಿಕಾರಿ ಬೈಕಿಗೆ 1000ದಂತೆ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಆರ್ ಟಿಒ ಮಧುರಾ
ಅಡೆಂಡರ್ ಮೂಲಕ ಡೀಲ್ ನಡೆಸುತ್ತಿದ್ದರು ಎನ್ನಲಾಗಿದೆ.
ಇದೀಗ ಹಣ ಪಡೆಯುವಾಗ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.
ಅಟೆಂಡರ್ ಲತಾ, ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು