4:35 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಲಂಚ ಬೇಡಿಕೆಯಿಟ್ಟ ಆರ್ ಟಿಒ ಅಧಿಕಾರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಅಟೆಂಡರ್

04/09/2023, 23:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚ ಪಡೆಯುತ್ತಿದ್ದ ಮಹಿಳಾ ಆರ್ ಟಿಒ ಹಾಗೂ ಮಹಿಳಾ ಅಟೆಂಡ್ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿದ್ದು, ಅಟೆಂಡರ್ ಅವರನ್ನು ವಶಕ್ಕೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಆರ್.ಟಿ.ಓ ಕಚೇರಿಯಲ್ಲಿ ನಡೆದಿದೆ.
3000 ಲಂಚ ಪಡೆಯುವಾಗ ಆರ್ ಟಿಒ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅಟೆಂಡರ್ ಲತಾ ಹಾಗೂ ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.
ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆಯನ್ನು ಆರ್.ಟಿ.ಓ. ಅಧಿಕಾರಿ ಮಧುರಾ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಬೈಕ್ ಶಾಪ್ ಓನರ್ ಮನವಿ ಮಾಡಿದ್ದರು. 1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದರು.
ಫೈಲ್ ಪೆಂಡಿಂಗ್ ಇಟ್ಟಿದ್ದ ಆರ್ ಟಿಒ ಅಧಿಕಾರಿ ಬೈಕಿಗೆ 1000ದಂತೆ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಆರ್ ಟಿಒ ಮಧುರಾ
ಅಡೆಂಡರ್ ಮೂಲಕ ಡೀಲ್ ನಡೆಸುತ್ತಿದ್ದರು ಎನ್ನಲಾಗಿದೆ.
ಇದೀಗ ಹಣ ಪಡೆಯುವಾಗ ಅಟೆಂಡರ್ ಲತಾ ಅವರು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.
ಅಟೆಂಡರ್ ಲತಾ, ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು