5:47 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬರೇ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ವರ್ಗಾವಣೆ!: ಡ್ರಗ್ಸ್, ಮಟ್ಕಾ ವಿರುದ್ಧ ಸಮರ ಸಾರಿದ್ದ ಅಧಿಕಾರಿ

05/09/2023, 10:12

ಮಂಗಳೂರು(reporterkarnataka.com):ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.ಸರಕಾರ ಈ ಕುರಿತು ಆದೇಶ ಹೊರಡಿಸಿದೆ.
ಕೇವಲ 5 ತಿಂಗಳ ಹಿಂದೆ ನೇಮಕಗೊಂಡ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷ ಅಧಿಕಾರಿ ಎಂದೇ ಗುರುತಿಸಿ ಕೊಂಡಿದ್ದ ಕುಲ್ ದೀಪ್ ಕುಮಾರ್ ಜೈನ್ ಅವರು
ಡ್ರಗ್ಸ್ ವಿರುದ್ದ ಸಮರ ಸಾರಿದ್ದರು. ಮಂಗಳೂರನ್ನು
ಡ್ರಗ್ಸ್ ಫ್ರೀ ಮಾಡುವ ಗುರಿ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು.
ಮಟ್ಕಾ, ಜೂಜು ಅಡ್ಡೆಗಳ ಮೇಲೆ‌ ನಿರಂತರ ದಾಳಿ ನಡೆಸಿದ್ದ ರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದೇ ಕುಲ್ ದೀಪ್ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು