12:59 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವಿಶೇಷ ಚೇತನ ಮಕ್ಕಳ ಜತೆ ಖ್ಯಾತ ನಟ ಅನಂತನಾಗ್ 75ನೇ ಹುಟ್ಟುಹಬ್ಬ

05/09/2023, 13:47

ಮಂಗಳೂರು(reporterkarnataka.com): ದಿವ್ಯಾಂಗ ಮಕ್ಕಳನ್ನು ಬಹಳ ಪ್ರೀತಿಯಿಂದ ಸಲಹಿ, ಅವರ ಸರ್ವತ್ತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅನಿರ್ವೇದ ಫೌಂಡೇಶನ್ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಖ್ಯಾತ ನಟ ಅನಂತನಾಗ್ ಹೇಳಿದರು.


ಅವರು ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್ ಇದರ ಸ್ಥಳಾಂತರಿತ ನೂತನ ಕಟ್ಟಡ ಉದ್ಘಾಟಿಸಿ, ವಿಶೇಷ ಚೇತನ ಮಕ್ಕಳ ಜೊತೆಗೂಡಿ ತಮ್ಮ‌ 75 ನೇ ಜನ್ಮದಿನವನ್ನು ಆಚರಿಸಿದರು.
ಮಕ್ಕಳೊಂದಿಗೆ ಕೇಕ್ ಕಟ್ ಮಾಡಿ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಅನಂತನಾಗ್ ಅವರು ಮಕ್ಕಳಲ್ಲಿಯೇ ದೇವರನ್ನು ಕಾಣಬೇಕೆಂಬ ಉದಾತ್ತ ಚಿಂತನೆಯನ್ನು ಆನಂದಾಶ್ರಮದಲ್ಲಿ ತಮ್ಮ ಗುರುಗಳು ಹೇಳಿಕೊಟ್ಟಿದ್ದರು. ಇಂತಹ ದಿವ್ಯಾಂಗ ಮಕ್ಕಳಿಗೆ ದಾರಿದೀಪವಾಗಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಶ್ವೇತಾ ಅವರು ಮಕ್ಕಳ ಬಾಳಿನಲ್ಲಿ ದೇವರ ರೂಪವಾಗಿ ಬಂದಿದ್ದೀರಿ. ನಿಮ್ಮ ಸೇವೆ ಇನ್ನಷ್ಟು ದಿವ್ಯ ಚೇತನ ಮಕ್ಕಳಲ್ಲಿ ಬೆಳಕಾಗಿ ಬರಲಿ. ಈ ಸಂಸ್ಥೆಯ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಡಾ. ಶ್ವೇತಾ ಅವರು ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿದ ಎಲ್ಲರನ್ನು ವಂದಿಸಿದರು. ಕಾರ್ಪೋರೇಟರ್ ನವೀನ್ ಡಿಸೋಜ ಅವರು ಮಾತನಾಡಿ, ಪಾಲಿಕೆ ಮತ್ತು ವೈಯಕ್ತಿಕವಾಗಿ ಸಂಸ್ಥೆಗೆ ಅಗತ್ಯ ನೆರವನ್ನು ನೀಡಲು ಬದ್ಧ ಎಂದು ತಿಳಿಸಿದರು.‌
ಡಾ. ರವಿಚಂದ್ರ ಶುಭ ಹಾರೈಸಿದರು.‌‌‌ಅನಂತನಾಗ್ ಪತ್ನಿ ಗಾಯತ್ರಿ ನಾಗ್, ಮಗಳು ಅದಿತಿ, ಅಳಿಯ ವಿವೇಕ್, ಆತ್ಮೀಯರಾದ ಮಂಗಲ್ಪಾಡಿ ನರೇಶ್ ಶೆಣೈ, ಅಂಜನಾ ಕಾಮತ್ ಹಾಗೂ ಸಂಸ್ಥೆಯ ಮಕ್ಕಳ ಪೋಷಕರು, ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು