4:34 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ವಿಶೇಷ ಚೇತನ ಮಕ್ಕಳ ಜತೆ ಖ್ಯಾತ ನಟ ಅನಂತನಾಗ್ 75ನೇ ಹುಟ್ಟುಹಬ್ಬ

05/09/2023, 13:47

ಮಂಗಳೂರು(reporterkarnataka.com): ದಿವ್ಯಾಂಗ ಮಕ್ಕಳನ್ನು ಬಹಳ ಪ್ರೀತಿಯಿಂದ ಸಲಹಿ, ಅವರ ಸರ್ವತ್ತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅನಿರ್ವೇದ ಫೌಂಡೇಶನ್ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಖ್ಯಾತ ನಟ ಅನಂತನಾಗ್ ಹೇಳಿದರು.


ಅವರು ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್ ಇದರ ಸ್ಥಳಾಂತರಿತ ನೂತನ ಕಟ್ಟಡ ಉದ್ಘಾಟಿಸಿ, ವಿಶೇಷ ಚೇತನ ಮಕ್ಕಳ ಜೊತೆಗೂಡಿ ತಮ್ಮ‌ 75 ನೇ ಜನ್ಮದಿನವನ್ನು ಆಚರಿಸಿದರು.
ಮಕ್ಕಳೊಂದಿಗೆ ಕೇಕ್ ಕಟ್ ಮಾಡಿ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಅನಂತನಾಗ್ ಅವರು ಮಕ್ಕಳಲ್ಲಿಯೇ ದೇವರನ್ನು ಕಾಣಬೇಕೆಂಬ ಉದಾತ್ತ ಚಿಂತನೆಯನ್ನು ಆನಂದಾಶ್ರಮದಲ್ಲಿ ತಮ್ಮ ಗುರುಗಳು ಹೇಳಿಕೊಟ್ಟಿದ್ದರು. ಇಂತಹ ದಿವ್ಯಾಂಗ ಮಕ್ಕಳಿಗೆ ದಾರಿದೀಪವಾಗಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಶ್ವೇತಾ ಅವರು ಮಕ್ಕಳ ಬಾಳಿನಲ್ಲಿ ದೇವರ ರೂಪವಾಗಿ ಬಂದಿದ್ದೀರಿ. ನಿಮ್ಮ ಸೇವೆ ಇನ್ನಷ್ಟು ದಿವ್ಯ ಚೇತನ ಮಕ್ಕಳಲ್ಲಿ ಬೆಳಕಾಗಿ ಬರಲಿ. ಈ ಸಂಸ್ಥೆಯ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಡಾ. ಶ್ವೇತಾ ಅವರು ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿದ ಎಲ್ಲರನ್ನು ವಂದಿಸಿದರು. ಕಾರ್ಪೋರೇಟರ್ ನವೀನ್ ಡಿಸೋಜ ಅವರು ಮಾತನಾಡಿ, ಪಾಲಿಕೆ ಮತ್ತು ವೈಯಕ್ತಿಕವಾಗಿ ಸಂಸ್ಥೆಗೆ ಅಗತ್ಯ ನೆರವನ್ನು ನೀಡಲು ಬದ್ಧ ಎಂದು ತಿಳಿಸಿದರು.‌
ಡಾ. ರವಿಚಂದ್ರ ಶುಭ ಹಾರೈಸಿದರು.‌‌‌ಅನಂತನಾಗ್ ಪತ್ನಿ ಗಾಯತ್ರಿ ನಾಗ್, ಮಗಳು ಅದಿತಿ, ಅಳಿಯ ವಿವೇಕ್, ಆತ್ಮೀಯರಾದ ಮಂಗಲ್ಪಾಡಿ ನರೇಶ್ ಶೆಣೈ, ಅಂಜನಾ ಕಾಮತ್ ಹಾಗೂ ಸಂಸ್ಥೆಯ ಮಕ್ಕಳ ಪೋಷಕರು, ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು