3:43 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ: ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವಸತಿ ಸಚಿವ ಜಮೀರ್ ಅಹಮದ್

05/09/2023, 19:45

ಮಂಗಳೂರು(reporterkarnataka.com) : ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದಲೇ ಭವಿಷ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯಪಟ್ಟರು.
ಕಣಚೂರು ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತಾನಾಡಿದ ಅವರು, ಶಿಕ್ಷಣ ಇಲ್ಲದಿದ್ದರೆ ಶೂನ್ಯ. ರಾಜಕೀಯ ಅಧಿಕಾರ ಸಿಗಬಹುದು. ಆದರೆ ಶಿಕ್ಷಣ ಇಲ್ಲದಿದ್ದರೆ ಏನೂ ಸಾಧಿಸಲಾಗದು ಎಂದು ಅವರು ನುಡಿದರು.


ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕೆಎಂಡಿಸಿ ಹಾಗೂ ಅಲ್ಪಸಂಖ್ಯಾತ ನಿರ್ದೇಶನಾಲಯದ ವತಿಯಿಂದ ಎಂಬಿಬಿಸ್, ಎಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಕ್ಕೆ ಸಾಕಷ್ಟು ನೆರವು ದೊರೆಯುತ್ತಿದೆ. ವೈದ್ಯಕೀಯ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ 5 ಲಕ್ಷ ರೂ. ಗೆ ಹೆಚ್ಚಿಸಲು, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 20 ರಿಂದ 30 ಲಕ್ಷ ರೂ. ವರೆಗೆ ಹೆಚ್ಚಿಸಲು ತೀರ್ಮಾನ ಮಾಡಿದ್ದೇವೆ. ಇದರ ಅನುಕೂಲ ಪಡೆಯಬೇಕು ಎಂದು ಹೇಳಿದರು.
ಕಣಚೂರು ವಿದ್ಯಾಸಂಸ್ಥೆ ಯಲ್ಲಿ 2018 ರಲ್ಲಿ 7 ಸಾವಿರ ಮಕ್ಕಳು ಪ್ರವೇಶ ಪಡೆದಿದ್ದು, ಈಗ ಅದರ ಸಂಖ್ಯೆ 10 ಸಾವಿರಕ್ಕೆ ಏರಿದೆ. ಇದು ಸಂಸ್ಥೆಯು ಗುಣಮಟ್ಟ ಶಿಕ್ಷಣ ನೀಡುತ್ತಿರುವುದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದರು.
ಪೌರಾಡಳಿತ ಸಚಿವ ರಹೀಮ್ ಖಾನ್, ಮಾತನಾಡಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಶಿಕ್ಷಣ ಕ್ಕೆ ಹೆಚ್ಚು ಒತ್ತು ಕೊಟ್ಟು ಬಡ ಕುಟುಂಬದ ಮಕ್ಕಳಿಗೆ ಇಲಾಖೆ ಮೂಲಕ ಉತ್ತಮ ನೆರವು ಕೊಡಿಸುತ್ತಿದ್ದಾರೆ ಎಂದು ತಿಳಿಸಿದರು.
ಕಣಚೂರು ವಿದ್ಯಾಸಂಸ್ಥೆ ಶೇ.100 ರಷ್ಟು ಫಲಿತಾಂಶ ಪಡೆದಿರುವುದು ಸಂತೋಷಕರ ಎಂದು ಅವರು ಹೇಳಿದರು.
ಕೆಎಂಡಿಸಿ ಅರಿವು ಯೋಜನೆಯಡಿ ಮೂರು ಲಕ್ಷ ರೂ. ಸಾಲ ಪಡೆದ ರಾಯಚೂರಿನ ಮೊಹಮದ್ ಅನ್ನಾನ್, ಶಿವಮೊಗ್ಗದ ಮೊಹಮದ್ ಸಲ್ಮಾನ್ ಅಹಮದ್ ಮಾತನಾಡಿ, ಸಾಲ ಸಿಕ್ಕಿದ್ದರಿಂದ ನಮಗೆ ತುಂಬಾ ಅನುಕೂಲ ಆಗಿದೆ. ಸಾಲದ ಮೊತ್ತ ಐದು ಲಕ್ಷ ರೂ. ಹೆಚ್ಚಿಸುವ ಪ್ರಸ್ತಾಪದಿಂದ ನಮ್ಮಂತಹ ಬಡ ಕುಟುಂಬದ ಮಕ್ಕಳಿಗೆ ವರದಾನ ಆಗಲಿದೆ. ಇಂತಹ ಕ್ರಮಕ್ಕೆ ಮುಂದಾದ ಸಚಿವ ಜಮೀರ್ ಅಹಮದ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್,
ಸಂಸ್ಥೆ ಮುಖ್ಯಸ್ಥ ಡಾ. ಹಾಜಿ ಯು ಕೆ ಮೋನು, ಡಾ. ಯು. ಟಿ.ಇಫ್ತಾಕಾರ್ ಅಲಿ, ಜಿ. ಎ. ಬಾವ, ಅಬ್ದುಲ್ ರೆಹಮಾನ್, ಮುಕುಲ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಹಾಗೂ ರಹೀಮ್ ಖಾನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು