11:19 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್

05/09/2023, 20:45

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಅವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಆದರೆ, ಕಾಂಗ್ರೆಸ್ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.


ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದವರು, ಮುಂದಿನ ಲೋಕಸಭಾ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ., ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್ ಎಸ್. ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು