2:59 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್

05/09/2023, 20:45

ಮಂಗಳೂರು(reporterkarnataka.com): ಪ್ರಧಾನಿ ಮೋದಿ ಅವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.
ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಆದರೆ, ಕಾಂಗ್ರೆಸ್ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.


ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದವರು, ಮುಂದಿನ ಲೋಕಸಭಾ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ., ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್ ಎಸ್. ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು