11:53 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪೊಲೀಸ್ ಕಮಿಷನರ್ ವರ್ಗಾವಣೆಯು ಡ್ರಗ್ಸ್ ವಿರುದ್ಧ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯಕ್ಕೆ ಹೊಡೆತ: ಶಾಸಕ ಡಾ. ಭರತ್ ಶೆಟ್ಟಿ ಕಿಡಿ

05/09/2023, 20:59

ಮಂಗಳೂರು(reporterkarnataka.com): ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ, ಸೇವನೆ, ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಮೂಲಕ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಕಿಡಿ ಕಾರಿದ್ದಾರೆ.
ನಮ್ಮ ಜಿಲ್ಲೆಯ ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮೀಷನರ್ ಅವರ ವರ್ಗಾವಣೆ ಮಾಡಿ ಕಾಂಗ್ರೆಸ್ ಏನು ಸಾಧಿಸಿತು. ಅಕ್ರಮ ಚಟುವಟಿಕೆಗೆ ಪರೋಕ್ಷವಾಗಿ ಆಡಳಿತ ಪಕ್ಷ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಿ ಮಕ್ಕಳ ಭವಿಷ್ಯ ಹಾಳಾದರೆ ಕಾಂಗ್ರೆಸ್ ಹೊಣೆ ಹೊರಬೇಕು ಎಂದು ಎಚ್ಚರಿಸಿರುವ ಶಾಸಕರು, ಹೊಸ ಕಮೀಷನರ್ ಅವರಿಗಾದರೂ ಪೂರ್ಣ ಸ್ವಾತಂತ್ರ್ಯ ನೀಡಿ ಈ ಹೋರಾಟ ಮುಂದುವರಿಸಲು ಎಲ್ಲಾ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಈ ಅನ್ಯಾಯದ ವಿರುದ್ದ ಹೋರಾಟ ಮಾಡಲಾಗುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು