4:08 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪತ್ನಿಯ ಗೋವಾ ಸುತ್ತಿಸಿ ಮನೆಗೆ ಬಂದ ಮರು ದಿನವೇ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ

06/09/2023, 10:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದು ವಾರಗಳ ಕಾಲ ಪತ್ನಿ ಜತೆ ಗೋವಾದಲ್ಲಿ ವಿಹರಿಸಿ ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನು ಭೀಕರವಾಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ.
ಮೃತಳನ್ನು ಶಮಾಭಾನು(34) ಎಂದು ಗುರುತಿಸಲಾಗಿದೆ. ಪತ್ನಿ ಹಂತಕ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನು ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು