7:07 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪತ್ನಿಯ ಗೋವಾ ಸುತ್ತಿಸಿ ಮನೆಗೆ ಬಂದ ಮರು ದಿನವೇ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ

06/09/2023, 10:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದು ವಾರಗಳ ಕಾಲ ಪತ್ನಿ ಜತೆ ಗೋವಾದಲ್ಲಿ ವಿಹರಿಸಿ ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನು ಭೀಕರವಾಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ.
ಮೃತಳನ್ನು ಶಮಾಭಾನು(34) ಎಂದು ಗುರುತಿಸಲಾಗಿದೆ. ಪತ್ನಿ ಹಂತಕ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನು ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು