2:10 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಡುಗಡ್ಡೆಯಲ್ಲಿ ಪರದಾಡುತ್ತಿರುವ ಬಡ ಕುಟುಂಬಗಳು: ತಿರುಗಿ ನೋಡದ ಜನಪ್ರತಿನಿಧಿಗಳು, ಅಧಿಕಾರಿಗಳು!!

26/07/2021, 09:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ದೊಡ್ಡಿಯ ಜನರು ಸಂಕಷ್ಟ ಎದುರಿಸುವಂತಾಗಿದೆ.ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ತಾಲೂಕು ಹಾಗೂ ಜಿಲ್ಲಾಡಳಿತ ವಿಫಲವಾಗಿದೆ.

ರಕ್ಷಣೆ ತಂಡ ಜತೆ ತಾಲೂಕು ಆಡಳಿತ ಆಗಮಿಸಿದಾಗ ಗ್ರಾಮಸ್ಥರು ಹಿಗ್ಗಾಮುಗ್ಗಾ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿ ವರ್ಷ ಮಳೆ ಬರುವಾಗ ಇವರು ಸಂಕಷ್ಟ ಎದುರಿಸುತ್ತಾರೆ.

ನೆರೆ ಸಂತ್ರಸ್ತರಿಗೆ ಪರಿಹಾರವೇ ಇಷ್ಟರವರೆಗೆ ದೊರಕಿಲ್ಲ.ಬರೀ ಆಶ್ವಾಸನೆ ನೀಡುತ್ತಾ ಜನಪ್ರತಿನಿಧಿಗಳು ಮತ್ತು ಅಧಿಕಾರಿ ಬಂದಿದ್ದಾರೆ. 

ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿ ಸ್ಥಳಕ್ಕಾಗಮಿಸುತ್ತಾರೆ. ತಹಶೀಲ್ದಾರ್ ಚಾಮರಾಜ ಪಾಟೀಲ್ ಬೇಜವಾಬ್ದಾರಿ ಕೆಲಸ ಮಾಡುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸುತ್ತಾರೆ.


ನಡುಗಡ್ಡೆ ನಿರಾಶ್ರಿತರಿಗೆ 25000 ಅನುದಾನ ನೀಡುವುದಾಗಿ ಭರವಸೆ ನೀಡಿದರು. ಸಹಾಯಕ ಆಯುಕ್ತರು ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಮಳೆಗಾಲದಲ್ಲಿ ಗರ್ಭಿಣಿಯರಿಗೆ, ವೃದ್ಧರಿಗೆ ಬಹಳ ತೊಂದರೆಯಾಗುತ್ತಿದೆ. ಹಳ್ಳ ನೀರು ಖಾಲಿಯಾಗುವವರೆಗೂ ಕಾಯುವ ಪರಿಸ್ಥಿತಿ ಇಲ್ಲಿ ಕುಟುಂಬಗಳಿಗೆ ಎದುರಾಗಿದೆ. ಸುಮಾರು ಬಡ ಕುಟುಂಬಗಳು ಈ ದೊಡ್ಡಿಯಲ್ಲಿ ವಾಸವಾಗಿದೆ. ಮಳೆ ಬಂದರೆ ಇವರ ಕಥೆ ಮುಗಿಯಿತು.

ಆ ಕಡೆಯಿಂದ ಈ ಕಡೆಗೆ ಬರುವ ಮಾತೇ ಇಲ್ಲ . ಮಕ್ಕಳು ಶಾಲೆಗೆ ಹೋಗೋದೇ ಇಲ್ಲ. ರಸ್ತೆ ಕಡಿತಗೊಳ್ಳುತ್ತದೆ. ಶಾಸಕರು ಮಾತ್ರ ಮೌನಕ್ಕೆ ಶರಣಾಗುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು