5:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ

26/07/2021, 12:06

ReporterKarntaka.com

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ, ‘ಅಭಿನಯ ಶಾರದೆ’ ಎಂದು ಅಭಿಮಾನದಿಂದ ಕರೆಸಿಕೊಂಡಿದ್ದರು. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದರು. ನಟಿ ಜಯಂತಿಯವರು ವಿಷ್ಣುವರ್ಧನ್, ಅಂಬರೀಷ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ಅಭಿನಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು